ಸಕ್ರೆಬೈಲು ಆನೆ ಬಿಡಾರದ ಆನೆ ಬಾಲಕ್ಕೆ ಗಾಯ ಪ್ರಕರಣ : ಇಬ್ಬರು ಕಾವಾಡಿಗಳು ಸಸ್ಪೆಂಡ್!

ಶಿವಮೊಗ್ಗ, ನ. 13: ಸಕ್ರೆಬೈಲು ಆನೆ ಬಿಡಾರದ ಆನೆಯೊಂದರ ಬಾಲಕ್ಕೆ ಉಂಟಾಗಿದ್ದ ಗಾಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಆನೆ ಬಿಡಾರದ ಇಬ್ಬರು ಕಾವಾಡಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಕಳೆದ ಅಕ್ಟೋಬರ್ 17 ರಂದು ಭಾನಾಮತಿ ಆನೆ ಕಾಡಿಗೆ ಮೇಯಲು ಹೋದಾಗ ಅದರ ಬಾಲಕ್ಕೆ ಮಚ್ಚಿನಿಂದ ಹೊಡೆದಂತೆ ಗಾಯವಾಗಿತ್ತು. ಅದರ ಅರ್ಧ ಬಾಲ ಜೋತಾಡುತ್ತಿತ್ತು. ಶಸ್ತ್ರಚಿಕಿತ್ಸೆ ಬಳಿಕ ಆನೆ ಚೇತರಿಸಿಕೊಂಡಿತ್ತು.

ಈ ಕುರಿತಂತೆ ಅರಣ್ಯ ಇಲಾಖೆ ಆಂತರಿಕ ತನಿಖೆ ನಡೆಸಲು ಕ್ರಮಕೈಗೊಂಡಿತ್ತು. ಇದೀಗ ಘಟನೆ ನಡೆದು ಹಲವು ದಿನಗಳ ನಂತರ, ಸದರಿ ಆನೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದ ಇಬ್ಬರು ಕಾವಾಡಿಗಳನ್ನು ಅಮಾನತ್ತುಗೊಳಿಸಲಾಗಿದೆ.

ನಿಗೂಢ: ಮಚ್ಚಿನೇಟಿನಿಂದ ಆನೆ ಬಾಲಕ್ಕೆ ಗಾಯವಾಗಿದೆ ಎಂದು ಹೇಳಲಾಗಿತ್ತು. ಇದಕ್ಕೆ ಕಾರಣಕರ್ತರಾದವರು ಯಾರು? ಬಾಲ ತುಂಡರಿಸುವ ಪ್ರಯತ್ನ ಮಾಡಿದ್ದು ಏಕೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ನಿಖರ ಉತ್ತರ ಸಿಕ್ಕಿಲ್ಲ. ಇದು ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ.

Briefing in public places by police at various places in Shimoga district: Grievance meeting ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪೊಲೀಸರಿಂದ ಸಾರ್ವಜನಿಕ ಸ್ಥಳಗಳಲ್ಲಿ ಬ್ರೀಫಿಂಗ್ : ಕುಂದುಕೊರತೆ ಸಭೆ Previous post ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪೊಲೀಸರಿಂದ ಸಾರ್ವಜನಿಕ ಸ್ಥಳಗಳಲ್ಲಿ ಬ್ರೀಫಿಂಗ್ : ಕುಂದುಕೊರತೆ ಸಭೆ
2250 per quintal. Maize purchase at price ಶಿವಮೊಗ್ಗ ದಕ್ಷಿಣ ಕನ್ನಡ ದಾವಣಗೆರೆ ಜಿ‍ಲ್ಲೆಗಳ ವ್ಯಾಪ್ತಿಯ ರೈತರ ಗಮನಕ್ಕೆ ಕರ್ನಾಟಕ ಹಾಲು ಮಹಾಮಂಡಳಿಯಿಂದ ಕ್ವಿಂಟಾಲ್ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ Next post ಕರ್ನಾಟಕ ಹಾಲು ಮಹಾಮಂಡಳಿಯಿಂದ ಕ್ವಿಂಟಾಲ್‍ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ