3000 for Graduates. - 1500 per month for diploma graduates. Online Application Invitation for Youth Fund Scheme

ಪದವೀಧರರಿಗೆ 3000 ರೂ. – ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ 1500 ರೂ. ನೀಡುವ ಯುವ ನಿಧಿ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ, ಡಿ. 27: ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

2022-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.  ಅನುಮೋದನೆಗೊಂಡ ಅಭ್ಯರ್ಥಿಗಳಿಗೆ ಮುಂದಿನ 24 ತಿಂಗಳು ಪದವೀಧರರಿಗೆ ಮಾಸಿಕ ರೂ. 3000/- ಹಾಗೂ ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500/- ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.  ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ. 

ಅರ್ಜಿ ಸಲ್ಲಿಸಲು ಕರ್ನಾಟಕದ ನಿವಾಸಿಯಾಗಿರಬೇಕು.  2023 ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಕೆಲಸ ಸಿಗುವವರೆಗೆ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.

ಅರ್ಜಿ ಸಲ್ಲಿಸುವ ದಿನಾಂಕ ಡಿ. 26 ರಿಂದ ಪ್ರಾರಂಭಗೊಂಡಿದ್ದು, ಆಸಕ್ತರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್‍ಗಳೊಂದಿಗೆ ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾ ಸಿಂಧು ಪೋರ್ಟಲ್‍ನಲ್ಲಿ ಯುವನಿಧಿ ಯೋಜನೆ ಸೇವೆ ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

The Shimoga city area has not been revised for exactly 25 years..! ಬರೋಬ್ಬರಿ 25 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ! Previous post ಬರೋಬ್ಬರಿ 25 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ..!
Shimoga: Rowdy sheeter shot in the leg! ಶಿವಮೊಗ್ಗ : ರೌಡಿ ಶೀಟರ್ ಕಾಲಿಗೆ ಗುಂಡೇಟು! ಶಿವಮೊಗ್ಗ, ಡಿ. 28: ಮಹಜರ್ ನಡೆಸಲು ಕರೆದೊಯ್ದ ವೇಳೆ ಪೊಲೀಸರ ಮೇಲೆಯೇ ಡ್ರ್ಯಾಗರ್ ನಿಂದ ದಾಳಿ ನಡೆಸಿ ಪರಾರಿಯಾಗಲೆತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಇಂದು ಬೆಳಿಗ್ಗೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಂಜ ಆಲಿಯಾಸ್ ಓಲಂಗಾ ಮಂಜ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆ ಯತ್ನ: ಕಳೆದ ಮೂರು ದಿನಗಳ ಹಿಂದೆ ಶಿವಮೊಗ್ಗದ ಫ್ರೀಡಂ ಪಾರ್ಕ್ ಬಳಿ ಯುವಕನೋರ್ವನ ಮೇಲೆ ಆರೋಪಿ ಓಲಂಗಾ ಮಂಜ ಹಾಗೂ ಇತರರು ಮಾರಕಾಸ್ತ್ರಗಳಿಂದ ಹೊಡೆದು ಗಾಯಗೊಳಿಸಿ ತಲೆಮರೆಸಿಕೊಂಡಿದ್ದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬುಧವಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಗುರುವಾರ ಬೆಳಿಗ್ಗೆ ಸ್ಥಳ ಮಹಜರು ನಡೆಸಲು ಹಾಗೂ ದಾಳಿಗೆ ಬಳಸಿದ ಮಾರಕಾಸ್ತ್ರ ವಶಕ್ಕೆ ಪಡೆಯಲು ಆರೋಪಿಯನ್ನು ಪೊಲೀಸರು ಕರೆದೊಯ್ದ ವೇಳೆ, ಡ್ರ್ಯಾಗರ್ ನಿಂದ ಪೊಲೀಸ್ ಪೇದೆ ರವಿ ಎಂಬುವರ ಮೇಲೆ ದಾಳಿ ನಡೆಸಿದ್ದ. ಸ್ಥಳದಲ್ಲಿದ್ದ ಇನ್ಸ್’ಪೆಕ್ಟರ್ ಸಿದ್ದೇಗೌಡ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. Next post ಶಿವಮೊಗ್ಗ : ರೌಡಿ ಶೀಟರ್ ಕಾಲಿಗೆ ಗುಂಡೇಟು!