'Expansion of Shivamogga Corporation - Action to be taken to discuss establishment of Police Commissionerate': Minister Madhu Bangarappa ‘ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ - ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆ ಚರ್ಚಿಸಿ ಕ್ರಮ’ : ಸಚಿವ ಮಧು ಬಂಗಾರಪ್ಪ

‘ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ – ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆ ಚರ್ಚಿಸಿ ಕ್ರಮ’ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಜ. 15: ‘ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಹಾಗೂ ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ 25 ವರ್ಷಗಳಿಂದ ಶಿವಮೊಗ್ಗ ನಗರ ವ್ಯಾಪ್ತಿ ಪರಿಷ್ಕರಣೆಯಾಗಿಲ್ಲ. ಪಾಲಿಕೆ ವ್ಯಾಪ್ತಿ ವಿಸ್ತರಣೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,

‘ಶಿವಮೊಗ್ಗ ನಗರದ ಹಲವೆಡೆ ಅಭಿವೃದ್ದಿ ಕುಂಠಿತವಾಗಿರುವುದು ಗಮನಕ್ಕೆ ಬಂದಿದೆ. ಕೆಲವೆಡೆ ದೊಡ್ಡ ದೊಡ್ಡ ಮನೆಗಳು ನಿರ್ಮಾಣವಾಗಿವೆ. ಆದರೆ ಮೂಲಸೌಕರ್ಯ ವ್ಯವಸ್ಥೆಗಳಲ್ಲಿ ಹೆಚ್ಚುಕಮ್ಮಿಯಿರುವುದು ಕಂಡುಬಂದಿದೆ. ಹಾಗೆಯೇ ರಸ್ತೆಗಳಂತ ಸೌಲಭ್ಯವೂ ಇಲ್ಲವಾಗಿದೆ’ ಎಂದರು.

ಶಿವಮೊಗ್ಗ ನಗರ ಬಹಳ ದೊಡ್ಡದಾಗಿ ಬೆಳೆದಿದೆ. ಜನಸಂಖ್ಯೆ ಹೆಚ್ಚಾಗಿದೆ. ನಗರ ವ್ಯಾಪ್ತಿ ವಿಸ್ತರಣೆಯ ಅಗತ್ಯವಿದೆ. ಈ ಕುರಿತಂತೆ ಚರ್ಚಿಸಲು ಪಾಲಿಕೆ ಆಯುಕ್ತರ ಜೊತೆ ಚರ್ಚೆ ನಡೆಸುತ್ತೆನೆ ಎಂದು ಹೇಳಿದರು.

ಕಾಲಮಿತಿಯೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಮುಖಂಡರ ಸಲಹೆ, ಸೂಚನೆ ಪಡೆದು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆಯೂ ಸಂಬಂಧಿಸಿದವರ ಜೊತೆ ಚರ್ಚಿಸಲಾಗುವುದು. ಆಡಳಿತ ವ್ಯವಸ್ಥೆಗೆ ಅನುಕೂಲಕರವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಮಧು ಬಂಗಾರಪ್ಪ ಅವರು ಸುದ್ದಿಗಾರರ ಪ್ರಶ್ನೆಗೆ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದ ಪ್ರೆಸ್ ಕಾಲೋನಿ ಸುತ್ತಮುತ್ತ ಹೆಚ್ಚಾದ ಕಳ್ಳಕಾಕರು : ಗಮನಹರಿಸುವರೆ ಪೊಲೀಸರು?! ಶಿವಮೊಗ್ಗ, ಜ. 15: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮಿನಕೊಪ್ಪದ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಕಳ್ಳಕಾಕರ ಹಾವಳಿ ವಿಪರೀತವಾಗಿದೆ. ಸ್ಥಳೀಯ ನಾಗರೀಕರ ನಿದ್ದೆಗೆಡುವಂತೆ ಮಾಡಿದೆ. ಭಾನುವಾರ ರಾತ್ರಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಯ, ಮೂರ್ನಾಲ್ಕು ಕಡೆ ಕಳವು ಕೃತ್ಯಗಳು ನಡೆದಿವೆ. ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ವಾಹನದಿಂದ ಪೆಟ್ರೋಲ್ ತೆಗೆಯುವುದರ ಜೊತೆಗೆ, ಕೆಲ ವಸ್ತುಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಇದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಉಳಿದಂತೆ ಕೆಲವೆಡೆ ನಿರ್ಮಾಣ ಹಂತದ ಕಟ್ಟಡಗಳ ಸ್ಥಳದ ಶೆಡ್ ಗಳ ಶೀಟ್ ಗಳನ್ನು ಕಿತ್ತು ಹಾಕಿ ಕಳವಿಗೆ ಯತ್ನಿಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಗಣಪತಿ ದೇವಾಲಯದ ಹುಂಡಿ ಒಡೆದು ಅದರೊಳಗಿದ್ದ ಸಾವಿರಾರು ರೂ. ಗಳನ್ನು ಕಳ್ಳರು ಅಪಹರಿಸಿದ್ದರು. ಮನೆಯೊಂದರ ಮುಂಭಾಗವಿದ್ದ ಕಬ್ಬಿಣದ ನೆಲಹಾಸನ್ನು ಕಳವು ಮಾಡಲಾಗಿತ್ತು ಎಂದು ನಿವಾಸಿಗಳು ತಿಳಿಸಿದ್ದಾರೆ. ‘ಬಡಾವಣೆಯ ಸುತ್ತಮುತ್ತ ಕಳ್ಳಕಾಕರ ಕಾಟ ಹೆಚ್ಚಾಗಿದೆ. ಇದರ ಜೊತೆಗೆ ಗಾಂಜಾ, ಮದ್ಯ ವ್ಯಸನಿಗಳ ಹಾವಳಿಯಿದೆ. ಕ್ರಿಮಿನಲ್ಸ್ ಗಳಿಗೆ ಯಾವುದೇ ಭಯವಿಲ್ಲವಾಗಿದೆ. ಇದು ಸಹಜವಾಗಿಯೇ ಆತಂಕ ಉಂಟು ಮಾಡಿದೆ. ಪೊಲೀಸರು ಕಳ್ಳಕಾಕರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು’ ಎಂದು ನಿವಾಸಿಗಳು ಆಗ್ರಹಿಸಿದ್ದಾರೆ. Previous post ಶಿವಮೊಗ್ಗದ ಪ್ರೆಸ್ ಕಾಲೋನಿ ಸುತ್ತಮುತ್ತ ಹೆಚ್ಚಾದ ಕಳ್ಳಕಾಕರು : ಗಮನಹರಿಸುವರೆ ಪೊಲೀಸರು?!
The will of the state government flows towards the important administrative demands of Shimoga..?! ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?! Next post ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?!