Shimoga - Bhadravati Urban Development Authority fenced the public road! ಸಾರ್ವಜನಿಕ ರಸ್ತೆಗೆ ಕಬ್ಬಿಣದ ತಡೆ ಬೇಲಿ ಹಾಕಿದ ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ!

ಸಾರ್ವಜನಿಕ ರಸ್ತೆಗೆ ಬೇಲಿ ಹಾಕಿದ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ..!

ಶಿವಮೊಗ್ಗ, ಜ. 17: ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ (ಸೂಡಾ) ವು ತನ್ನ ಕಚೇರಿ ಪಕ್ಕದ ಸಾರ್ವಜನಿಕ ರಸ್ತೆಯೊಂದಕ್ಕೆ ಕಬ್ಬಿಣದ ತಡೆ ಬೇಲಿ ಹಾಕಿ, ವಾಹನ ಸಂಚಾರಕ್ಕೆ ಅಡೆತಡೆ ಉಂಟು ಮಾಡಿರುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ!

‘ಕಚೇರಿಯ ಕಾರುಗಳ ನಿಲುಗಡೆಗೆ ತೊಂದರೆಯಾಗುತ್ತಿರುವ ಕಾರಣದಿಂದ ಸದರಿ ಸಾರ್ವಜನಿಕ ರಸ್ತೆ ಬಂದ್ ಮಾಡಲು ಮುಖ್ಯ ಕಾರಣವಾಗಿದೆ’ ಎಂದು ಸ್ಥಳೀಯ ಪತ್ರ ಬರಹಗಾರರ ಸಂಘದ ಮುಖಂಡ ಜಿ.ಎಂ.ಸುರೇಶ್ ಬಾಬು ಅವರು ದೂರಿದ್ದಾರೆ.

‘ಕಳೆದ ಹಲವು ದಶಕಗಳಿಂದ ಸದರಿ ರಸ್ತೆಯಿದೆ. ಇದೀಗ ಏಕಾಏಕಿ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಿದ ಕ್ರಮ ಅಕ್ಷಮ್ಯ ಅಪರಾಧವಾಗಿದೆ. ಇದು ಜನ ವಿರೋಧಿಯಾದುದಾಗಿದೆ. ಸಕಾರಣವಿಲ್ಲದೆ ಜನ – ವಾಹನ ಸಂಚಾರವಿರುವ ರಸ್ತೆ ಬಂದ್ ಮಾಡಲು ಮುಂದಾಗಿರುವುದು ಏಕೆ? ಎಂಬುವುದು ಗೊತ್ತಾಗುತ್ತಿಲ್ಲ.

ಈ ಕುರಿತಂತೆ ಪ್ರಾಧಿಕಾರ ಆಡಳಿತ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಬೇಕು. ತತ್’ಕ್ಷಣವೇ ಸಾರ್ವಜನಿಕ ರಸ್ತೆಗೆ ಹಾಕಿರುವ ಕಬ್ಬಿಣದ ತಡೆಗೋಡೆ ತೆಗೆಯಬೇಕು. ಸುಗಮ ಜನ – ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು’ ಎಂದು ಜಿ.ಎಂ.ಸುರೇಶ್ ಬಾಬು ಆಗ್ರಹಿಸಿದ್ದಾರೆ.

*** ಸದ್ಯ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ‍್ಯಕ್ಷರಾಗಿ ಜಿಲ್ಲಾಧಿಕಾರಿಗಳೇ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಕಚೇರಿ ಪಕ್ಕದ ಸಾರ್ವಜನಿಕ ರಸ್ತೆ ಬಂದ್ ಮಾಡುತ್ತಿರುವ ಪ್ರಾಧಿಕಾರದ ಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿಯೇ ಇದೆಯೇ? ಇಲ್ಲವೇ? ಎಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.

Government Employees' Association requests CM to announce wage revision before Lok Sabha Elections Code of Conduct is announced ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆ ಘೋಷಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ Previous post ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ
Today as great patriots why did the Fojus compromise with the British without fighting : CM Siddaramaiah Question ಇಂದು ಮಹಾನ್ ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಹೋರಾಡದೆ ಏಕೆ ಹೊಂದಾಣಿಕೆ ಮಾಡಿಕೊಂಡಿದ್ದರು : ಸಿಎಂ ಸಿದ್ದರಾಮಯ್ಯ ಪ್ರಶ್ನೆ Next post ‘ಇಂದು ಮಹಾನ್ ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಹೋರಾಡದೆ ಏಕೆ ಹೊಂದಾಣಿಕೆ ಮಾಡಿಕೊಂಡಿದ್ದರು’ : ಸಿಎಂ ಸಿದ್ದರಾಮಯ್ಯ ಪ್ರಶ್ನೆ