
ವನ್ಯಜೀವಿ ವಸ್ತುಗಳನ್ನು ಹಿಂದಿರುಗಿಸಲು ನಾಗರೀಕರಿಗೆ ಅರಣ್ಯ ಇಲಾಖೆ ಡೆಡ್ ಲೈನ್..!
ಶಿವಮೊಗ್ಗ, ಜ. 25: ಹುಲಿ ಉಗುರು ಪ್ರಕರಣದ ನಂತರ, ರಾಜ್ಯಾದ್ಯಂತ ಅರಣ್ಯ ಜೀವಿ ವಸ್ತುಗಳನ್ನು ಕಾನೂನುಬಾಹಿರವಾಗಿ ಹೊಂದಿರುವವರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ನಡುವೆ ರಾಜ್ಯ ಅರಣ್ಯ ಇಲಾಖೆಯು, ವನ್ಯಜೀವಿ ವಸ್ತುಗಳನ್ನು ಹಿಂದಿರುಗಿಸಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ.
ವನ್ಯಜೀವಿ, ಅಘೋಷಿತ ವನ್ಯಜೀವಿ / ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏಪ್ರಿಲ್ 11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಸದರಿ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ),
ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು 100 ರೂಪಾಯಿ ಮೌಲ್ಯದ ಛಾಪಾ ಕಾಗದದಲ್ಲಿ ಅಫಿಡವಿಟ್ – ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಅರಣ್ಯ ಇಲಾಖೆಯ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.