
ಶಿವಮೊಗ್ಗದ ಹಂಗಾಮಿ ನೌಕರರ ಸಂಘದ ರಿಕ್ರಿಯೇಷನ್ ಕ್ಲಬ್ ನಲ್ಲಿ ಅಂದರ್ – ಬಾಹರ್ ಇಸ್ಪೀಟ್ ಜೂಜು : 18 ಜನರ ಬಂಧನ
ಶಿವಮೊಗ್ಗ, ಜ. 29: ಸಂಘವೊಂದರ ಮನರಂಜನಾ (ರಿಕ್ರಿಯೇಷನ್) ಕ್ಲಬ್ ಮೇಲೆ ದೊಡ್ಡಪೇಟೆ ಠಾಣೆ ಪೊಲೀಸರು ದಾಳಿ ನಡೆಸಿ, ಅಂದರ್ –ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ, 18 ಜನರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಗಾರ್ಡನ್ ಏರಿಯಾದ ತುಂಗಾಭದ್ರಾ ಹಂಗಾಮಿ ನೌಕರರ ಮನೋರಂಜನಾ ಸಂಘದ ಕ್ಲಬ್ ಮೇಲೆ ಜ. 28 ರ ಸಂಜೆ, ಅಂದರ್ – ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಆರೋಪಿಗಳಿಂದ 21,700 ನಗದು, ಇಸ್ಪೀಟ್ ಎಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೆಪಿ ಕಾಯ್ದೆ ತಿದ್ದುಪಡಿ 2021 ಕಲಂ 79, 80 ರ ಅಡಿ ಪ್ರಕರಣ ದಾಖಲಿಸಲಾಗಿದೆ.
ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ ಎ ಜಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ನೇತೃತ್ವದಲ್ಲಿ ಇನ್ಸ್’ಪೆಕ್ಟರ್ ರವಿ ಪಾಟೀಲ್ ಮತ್ತವರ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.
More Stories
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರ ಅಕ್ರಮ ಮರಳು ಲೂಟಿಗೆ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?
shimoga | A temporary break in illegal sand looting after the case of the female officer: Does the administration need to wake up?
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರಕ ಅಕ್ರಮ ಮರಳು ಲೂಟಿಗೆ ತಾತ್ಕಾಲಿಕ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?