Shimoga - Head-on collision between two cars: Three dead and five injured! ಶಿವಮೊಗ್ಗ - ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಮೂವರು ಸಾವು – ಐವರಿಗೆ ಗಾಯ!

ಶಿವಮೊಗ್ಗ – ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಮೂವರು ಸಾವು – ಐವರಿಗೆ ಗಾಯ!

ಶಿವಮೊಗ್ಗ, ಜು. 6: ಎರಡು ಕಾರುಗಳ (car) ನಡುವೆ ಮುಖಾಮುಖಿ ಡಿಕ್ಕಿ (accident) ಸಂಭವಿಸಿ ಮೂವರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಶಿವಮೊಗ್ಗ (shimoga) ನಗರದ ಹೊರವಲಯ ತ್ಯಾವರೆಕೊಪ್ಪ (tyavarekoppa) ಸಿಂಹಾಧಾಮ (lion safari) ಬಳಿಯ ಟ್ರೀ ಪಾರ್ಕ್ ಸಮೀಪದ ರಾಷ್ಟ್ರೀಯ ಹೆದ್ಧಾರಿಯಲ್ಲಿ (national highway) ಶನಿವಾರ ಬೆಳಿಗ್ಗೆ ನಡೆದಿದೆ.

ಮೃತಪಟ್ಟವರು ಹಾಗೂ ಗಾಯಗೊಂಡವರ ಬಗ್ಗೆ ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ. ಸ್ವಿಫ್ಟ್ ಕಾರಿನಲ್ಲಿ (swift) ಪ್ರಯಾಣಿಸುತ್ತಿದ್ದವರು ಮೃತಪಟ್ಟಿದ್ದಾರೆ ಎಂದು ಕೆಲ ಸ್ಥಳೀಯರು ಮಾಹಿತಿ ನೀಡಿದ್ದಾರೆ.  

ಶಿವಮೊಗ್ಗದಿಂದ ಸಾಗರದೆಡೆಗೆ (shimoga to sagara) ತೆರಳುತ್ತಿದ್ದ ಇನ್ನೋವಾ (inova car) ಹಾಗೂ ಸಾಗರದಿಂದ ಶಿವಮೊಗ್ಗದೆಡೆಗೆ (sagar to shimoga) ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿನ (swift desire car) ನಡುವೆ ಈ ಭೀಕರ ಅಪಘಾತ (terrible accident) ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಗಾಯಾಳುಗಳ (injured persons) ನೆರವಿಗೆ ಧಾವಿಸಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ (govt meggan hospital) ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಓರ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಅಪಘಾತದಿಂದ ಹೆದ್ದಾರಿಯಲ್ಲಿ (highway) ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು (Traffic was chaotic) ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (asp) ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಟ್ರಾಫಿಕ್ ಠಾಣೆ, ಕುಂಸಿ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

Petition from the residents demanding inclusion in Shimoga Metropolitan Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಲು ಆಗ್ರಹಿಸಿ ನಿವಾಸಿಗಳಿಂದ ಮನವಿ Previous post ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಲು ಆಗ್ರಹಿಸಿ ನಿವಾಸಿಗಳಿಂದ ಮನವಿ
ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! ಶಿವಮೊಗ್ಗ, ಜು. 6: ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿದಿದ್ದರೂ ಅಬ್ಬರ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ನೀರಿನ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ. ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ ಲಿಂಗನಮಕ್ಕಿ ಡ್ಯಾಂನ ಒಳಹರಿವು 20,420 ಕ್ಯೂಸೆಕ್ ಗೆ ಇಳಿಕೆಯಾಗಿದೆ. 2030 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1764.8 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1744.4 ಅಡಿ ನೀರು ಸಂಗ್ರಹವಾಗಿತ್ತು. ಭದ್ರಾ ಡ್ಯಾಂನ ಒಳಹರಿವು 7736 ಕ್ಯೂಸೆಕ್ ಗೆ ಇಳಿಕೆಯಾಗಿದೆ. 352 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 130.7 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 138 ಅಡಿಯಿತ್ತು. ಉಳಿದಂತೆ ತುಂಗಾ ಜಲಾಶಯವು ಈಗಾಗಲೇ ಗರಿಷ್ಠ ಮಟ್ಟವಾದ 588.24 ಮೀಟರ್ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 17,289 ಕ್ಯೂಸೆಕ್ ಇದೆ. 14,662 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ. ಮಳೆ ವಿವರ : ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗದಲ್ಲಿ 10.20 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5.70 ಮಿ.ಮೀ., ತೀರ್ಥಹಳ್ಳಿ 45.80 ಮಿ.ಮೀ., ಸಾಗರ 29.10 ಮಿ.ಮೀ., ಶಿಕಾರಿಪುರ 5.20 ಮಿ.ಮೀ., ಸೊರಬ 8 ಮಿ.ಮೀ ಹಾಗೂ ಹೊಸನಗರದಲ್ಲಿ 42.50 ಮಿ.ಮೀ,. ಮಳೆಯಾಗಿದೆ. ಶನಿವಾರ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಮುಂದುವರಿದಿದೆ. ತಾಪಮಾನದ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ತಣ್ಣನೆಯ ವಾತಾವರಣ ನೆಲೆಸಿದೆ. ಮುಂದಿನ ಕೆಲ ದಿನಗಳವರೆಗೆ ಜಿಲ್ಲೆಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. Next post ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!