District In-charge Minister Madhu Bangarappa visited the flood affected areas of Shimoga district ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ

ಪ್ರವಾಹ ಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಸಾಗರ / ಹೊಸನಗರ, ಜು. 21: ಭಾರೀ ಮಳೆಯಿಂದ (heavy rainfall) ಹಾನಿಗೀಡಾದ ಸಾಗರ (sagar), ಹೊಸನಗರ (hosanagar) ತಾಲೂಕಿನ ವಿವಿಧ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (district incharge minister madhu bangarappa) ಅವರು ಅಧಿಕಾರಿಗಳ ತಂಡದೊಂದಿಗೆ ಭಾನುವಾರ ಭೇಟಿಯಿತ್ತು ಪರಿಶೀಲನೆ ನಡೆಸಿದರು.

ನೆರೆ ಪೀಡಿತ (flood affected) ಸ್ಥಳಗಳಿಗೆ ಸಚಿವರು ಭೇಟಿ ನೀಡಿ ಜಲಾವೃತಗೊಂಡ ಕೃಷಿ ಜಮೀನು ಹಾಗೂ ಮಳೆಯಿಂದ ಹಾನಿಗೀಡಾದ ಕಟ್ಟಡಗಳ ವೀಕ್ಷಣೆ ಮಾಡಿ, ಸ್ಥಳೀಯರ ಅಹವಾಲುಗಳನ್ನು ಆಲಿಸಿದರು. ಈ ಎರಡು ತಾಲೂಕುಗಳ ಭೇಟಿಯ ನಂತರ, ತೀರ್ಥಹಳ್ಳಿ (thirthahalli) ತಾಲೂಕಿನ ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವರು ಭೇಟಿ ನೀಡಲು ತೆರಳಿದರು.

ಈ ವೇಳೆ ಸಾಗರದಲ್ಲಿ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು. ವರದಾ ನದಿ (varada river) ಉಕ್ಕಿ ಹರಿಯುತ್ತಿರುವುದರಿಂದ ಹಲವೆಡೆ  ಕೃಷಿ ಭೂಮಿಗಳು ಜಲಾವೃತವಾಗಿವೆ. ಜಲಾವೃತ ಸ್ಥಿತಿ ತಪ್ಪಿಸಲು 6 ಕಡೆ ಬ್ಯಾರೇಜ್ (barrage) ನಿರ್ಮಾಣಕ್ಕೆ 53 ಕೋಟಿ ರೂ. ಮಂಜೂರಾಗಿದೆ. ಮಳೆಗಾಲ (rainy season) ಪೂರ್ಣಗೊಂಡ ನಂತರ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಮಳೆ ಸಂಬಂಧಿತ ಘಟನೆಗಳಲ್ಲಿ (rain related incidents) ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

A young man who had arrived from Bangalore disappeared near the Joga waterfall! ಜೋಗ ಜಲಪಾತದ ಬಳಿ ಬೆಂಗಳೂರಿನಿಂದ ಆಗಮಿಸಿದ್ದ ಯುವಕ ಕಣ್ಮರೆ! Previous post ಜೋಗ ಜಲಪಾತದ ಬಳಿ ಬೆಂಗಳೂರಿನಿಂದ ಆಗಮಿಸಿದ್ದ ಯುವಕ ಕಣ್ಮರೆ!
Sudden police attack on Shimoga Central Jail! ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ದಿಢೀರ್ ದಾಳಿ ಜೈಲ್ Next post ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ದಿಢೀರ್ ದಾಳಿ!