
ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ : ತಂದೆ ಸಾವು, ಮಗನಿಗೆ ಗಾಯ!
ಶಿವಮೊಗ್ಗ, ಮಾ. 7: ವೇಗವಾಗಿ ಆಗಮಿಸಿದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಮೊಪೆಡ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಬುಳ್ಳಾಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

ಬುಳ್ಳಾಪುರ ಗ್ರಾಮದ ನಿವಾಸಿಯಾದ ಕರಿಬಸಪ್ಪ (65) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರ ಪುತ್ರ ಬಸವರಾಜ್ (35) ಅವರಿಗೆ ಗಾಯವಾಗಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಅಜಾಗರೂಕ, ಮಿತಿಮೀರಿದ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಈ ಸಂಬಂಧ ಬಸ್ ಚಾಲಕನ ವಿರುದ್ದ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In#accident, #accidentnews #udayasaakshi #udayasaakshinews #shivamogganews, #bikerider, #busaccident, #crimenews, #ksrtcbus, #pillonrider, #roadaccident, #ruralpolicestation, #shimogacrimenews, #shimoganews, #shivamogganews, #ಅಪಘಾತ, #ಅಪರಾಧವರದಿ, #ಉದಯಸಾಕ್ಷಿ, #ಉದಯಸಾಕ್ಷಿನ್ಯೂಸ್, #ಕ್ರೈಂನ್ಯೂಸ್, #ಬಸ್_ಡಿಕ್ಕಿ, #ರಸ್ತೆಅಪಘಾತ, #ಶಿವಮೊಗ್ಗ, #ಶಿವಮೊಗ್ಗನ್ಯೂಸ್, #ಶಿವಮೊಗ್ಗಸುದ್ದಿ