
ಡಾ.ಬಿ.ಆರ್.ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿಯಿಂದ ಡಿಸಿಗೆ ಮನವಿ
ಶಿವಮೊಗ್ಗ, ಮಾ. 13: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಆದಿಜಾಂಬವ ರಾಜ್ಯ ಸಮಿತಿ ತಿಳಿಸಿದೆ.
ವಿಶೇಷ ಜಯಂತಿ ಆಚರಣೆಗೆ ಅನುಮತಿ ಕೋರಿ ಸೋಮವಾರ ಶಿವಮೊಗ್ಗ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಸಮಿತಿಯು ಮನವಿ ಪತ್ರ ಅರ್ಪಿಸಿತು.
ಜಿಲ್ಲೆಯ 7 ತಾಲೂಕು ಕೇಂದ್ರಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ವಿಶೇಷ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಸಕಲ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಂಘಟನೆಯು ತಿಳಿಸಿದೆ.
ಮನವಿ ಅರ್ಪಿಸುವ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಎನ್.ಪ್ರಕಾಶ್, ಗೌರವಾಧ್ಯಕ್ಷರಾದ ದೇವೇಂದ್ರಪ್ಪ, ಪ್ರಮುಖರಾದ ಕಲ್ಲಪ್ಪ, ಲಿಂಗರಾಜು, ಪ್ರದೀಪ್, ಶಿವಪ್ಪ, ಹಳದಪ್ಪ ಸೇರಿದಂತೆ ಮೊದಲಾದವರಿದ್ದರು.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 25 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 25: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 25-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ : ಅಂತಿಮ ಯಾತ್ರೆಗೆ ಜನಸಾಗರ.. ಮುಗಿಲು ಮುಟ್ಟಿದ ಆಕ್ರಂದನ..!
shimoga | Manjunath Rao who was killed in a terrorist attack: Arrangements made for the last rites at Vijayanagara residence in Shivamogga
shimoga | ಭಯೋತ್ಪಾದಕ ಗುಂಡೇಟಿಗೆ ಬಲಿಯಾದ ಮಂಜುನಾಥ್ ರಾವ್ : ಶಿವಮೊಗ್ಗದ ವಿಜಯನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
shimoga|ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 24 ರ ತರಕಾರಿ ಬೆಲೆಗಳವಿವರ
ಶಿವಮೊಗ್ಗ (shivamogga), ಏ. 24: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 24-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 23 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 23: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 23-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...