‘ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್
ಸಾಗರ, ಜು.19: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜು. 18 ರಂದು ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಪ್ರತಿಯೊಂದು ಹಳ್ಳಿಗಳಲ್ಲಿಯೂ, ಯುವಕರನ್ನೊಳಗೊಂಡ ಯುವ ಪಡೆ ರಚಿಸಲಾಗಿದೆ. ಸದರಿ ಪಡೆಯು ಗ್ರಾಮಗಳಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ. ಜೊತೆಗೆ ಆಯಾ ಗ್ರಾಮಗಳಲ್ಲಿ ನೆರವಿನ ಅಗತ್ಯವಿರುವವರಿಗೆ ಸಹಕಾರ ನೀಡಲಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಪೊಲೀಸ್ ಇಲಾಖೆಯು, ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಪಾಲನೆ ಕುರಿತಂತೆ ನಿರಂತರವಾಗಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿಕೊಂಡು ಬರುತ್ತಿದೆ. ಆನಂದಪುರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಅಗತ್ಯ ಕ್ರಮಕೈಗೊಳ್ಳಲಿದೆ ಎಂದರು.

ಕಾನೂನು ರೀತ್ಯ ಯಾರೇ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದಾಗ ಅದನ್ನು ದಾಖಲಿಸಿಕೊಳ್ಳಲಾಗುತ್ತದೆ. ನಂತರ ಪ್ರಕರಣದ ತನಿಖೆಯ ವೇಳೆ ಕಂಡುಬರುವ ಅಂಶಗಳ ಆಧಾರದ ಮೇಲೆ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಲಾಗುತ್ತದೆ ಎಂದು ದೂರಿಗೆ ಪ್ರತಿದೂರು ದಾಖಲಾಗುತ್ತಿರುವ ಕುರಿತಂತೆ ಸಾರ್ವಜನಿಕರ ಪ್ರಶ್ನೆಗಳಿಗೆ ಜಿಲ್ಲಾ ರಕ್ಷಣಾಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

ಸಭೆಯಲ್ಲಿ ಸಾಗರ ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಪ್ರವೀಣ್, ಆನಂದಪುರ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಯುವರಾಜ್ ಉಪಸ್ಥಿತರಿದ್ದರು.
More Stories
ಸಾಗರ | sagara news | ಮೊಬೈಲ್ ಪೋನ್ ಚಾರ್ಜ್ ಹಾಕುವ ವಿಚಾರದಲ್ಲಿ ನಡೆದಿದ್ದ ಕೊಲೆ ಪ್ರಕರಣ : ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ!
Murder case over mobile phone charging: Man sentenced to rigorous imprisonment!
ಸಾಗರ | ಮೊಬೈಲ್ ಪೋನ್ ಚಾರ್ಜ್ ಹಾಕುವ ವಿಚಾರದಲ್ಲಿ ನಡೆದಿದ್ದ ಕೊಲೆ ಪ್ರಕರಣ : ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ!
sagara accident news | ಸಾಗರ : ಸರ್ಕಾರಿ ಬಸ್ – ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿ!
Sagara: Head-on collision between government bus and school bus!
ಸಾಗರ : ಸರ್ಕಾರಿ ಬಸ್ – ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿ!
kargal | ಕಾರ್ಗಲ್ ಪಟ್ಟಣದಲ್ಲಿ ಪೊಲೀಸರ ಪಥ ಸಂಚಲನ!
Police parade in Kargal town!
ಕಾರ್ಗಲ್ ಪಟ್ಟಣದಲ್ಲಿ ಪೊಲೀಸರ ಪಥ ಸಂಚಲನ
ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರಕ್ಕೆ!
Water out of Linganamakki reservoir!
ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರಕ್ಕೆ
ಗನ್ ಪ್ರದರ್ಶನದ ವೈರಲ್ ವೀಡಿಯೋದ ಸತ್ಯಾಂಶವೇನು? : ಮಕ್ಕಳಾಟದ ನಕಲಿ ಏರ್ ಪಿಸ್ತೂಲ್ ತೋರಿಸಿದ್ದು ಬೆಳಕಿಗೆ…!
What is the truth behind the viral video of the gun show? : The fake air pistol of Maklaklata was shown to the light!
ಗನ್ ಪ್ರದರ್ಶನದ ವೈರಲ್ ವೀಡಿಯೋದ ಸತ್ಯಾಂಶವೇನು? : ಮಕ್ಕಳಾಟದ ನಕಲಿ ಏರ್ ಪಿಸ್ತೂಲ್ ತೋರಿಸಿದ್ದು ಬೆಳಕಿಗೆ!
ಪರಿಸರ ಪ್ರೇಮಿ ಮನೆ ಮುಂಭಾಗವಿದ್ದ ಶ್ರೀಗಂಧದ ಮರಗಳನ್ನೇ ಕಳವು ಮಾಡಿದ ಕಳ್ಳರು!
Thieves stole the sandalwood trees in front of the house of an environmental lover!
ಪರಿಸರ ಪ್ರೇಮಿ ಮನೆ ಮುಂಭಾಗವಿದ್ದ ಶ್ರೀಗಂಧದ ಮರಗಳನ್ನೇ ಕಳವು ಮಾಡಿದ ಕಳ್ಳರು!
