ಶಿವಮೊಗ್ಗ ನಗರ ಕ್ಷೇತ್ರ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ನಿದ್ದೆಗೆಡಿಸಿದ  ಬಿಜೆಪಿ ಶಾಸಕ ಆಯನೂರು ಮಂಜುನಾಥ್..!

ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ , ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಅಂತೆಕಂತೆ ವದಂತಿಗಳು ‘ಕೈ’ ಪಾಳೇಯದಲ್ಲಿ ಮನೆ ಮಾಡಿದೆ. ಇದು ಬಿರುಸಿನ ಚರ್ಚೆಗೆ ಎಡೆ ಮಾಡಿಕೊಟ್ಟಿದೆ!

ವರದಿ : ಬಿ.ರೇಣುಕೇಶ್

ಶಿವಮೊಗ್ಗ, ಮಾ. 29: ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ , ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಅಂತೆಕಂತೆ ವದಂತಿಗಳು ‘ಕೈ’ ಪಾಳೇಯದಲ್ಲಿ ಮನೆ ಮಾಡಿದೆ. ಇದು ಬಿರುಸಿನ ಚರ್ಚೆಗೆ ಎಡೆ ಮಾಡಿಕೊಟ್ಟಿದೆ!

ಈ ವದಂತಿಗಳು, ಕಾಂಗ್ರೆಸ್ ಪಕ್ಷದ ಕೆಲ ಟಿಕೆಟ್ ಆಕಾಂಕ್ಷಿಗಳಲ್ಲಿ ಭಾರೀ ತಳಮಳ ಸೃಷ್ಟಿಸಿದೆ. ಎಲ್ಲಿ  ಟಿಕೆಟ್ ಕೈ ತಪ್ಪಲಿದೆಯೋ ಎಂಬ ಆತಂಕಕ್ಕೊಳಗಾಗುವಂತೆ ಮಾಡಿಸಿದೆ.  

ಈ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರುಗಳ ಮೂಲಕ, ಆಯನೂರು ಮಂಜುನಾಥ್ ಪಕ್ಷ ಸೇರ್ಪಡೆ ವಿರುದ್ದ ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್ ಮೇಲೆ ಒತ್ತಡ ಹಾಕಿಸುವ ತಂತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರತಿಜ್ಞೆ!: 32 ವಾರ್ಡ್ ಗಳ ಕಾಂಗ್ರೆಸ್ ಅಧ್ಯಕ್ಷರು ಸೋಮವಾರ ದಿಢೀರ್ ಆಗಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಭೆ ಸೇರಿ ಪ್ರತಿಜ್ಞೆ ಮಾಡಿರುವುದು ಇದರ ಮುನ್ಸೂಚನೆ ಎಂದೇ ಹೇಳಲಾಗುತ್ತಿದೆ.

‘ಶಿವಮೊಗ್ಗ ನಗರ ಕ್ಷೇತ್ರದಿಂದ ಕಣಕ್ಕಿಳಿಯುವ ಆಕಾಂಕ್ಷೆ ವ್ಯಕ್ತಪಡಿಸಿ 11 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಕೆಲಸ ಮಾಡುತ್ತೆವೆ. ಒಂದು ವೇಳೆ ಇದನ್ನು ಹೊರತುಪಡಿಸಿ, ಬೇರೆಯವರಿಗೆ ಟಿಕೆಟ್ ನೀಡಿದರೆ ನಮ್ಮಗಳ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತವೆ. ಚುನಾವಣೆಯಲ್ಲಿ ಕಾರ್ಯನಿರ್ವಹಣೆ ಮಾಡುವುದಿಲ್ಲ. ತಟಸ್ಥರಾಗಿ ಉಳಿಯುತ್ತೆವೆ’ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಬಂಡಾಯ: ಇತ್ತೀಚೆಗೆ ಆಯನೂರು ಮಂಜುನಾಥ್ ಅವರು ಶಿವಮೊಗ್ಗ ನಗರ ಕ್ಷೇತ್ರದಿಂದ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು ಎಂದು ಬಂಡಾಯದ ಕಹಳೆ ಮೊಳಗಿಸಿದ್ದಾರೆ. ತಾವು ಕೂಡ ಬಿಜೆಪಿ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದರು. 

ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಆಯನೂರು ಮಂಜುನಾಥ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಅವರಿಗೆ ಟಿಕೆಟ್ ಸಿಗಲಿದೆ ಎಂಬ ವದಂತಿಗಳು ‘ಕೈ’ ಪಾಳೇಯದಲ್ಲಿ ಹಬ್ಬಿದೆ. ಒಟ್ಟಾರೆ ‘ಅವರ್ ಬಿಟ್ ಇವರ್ ಬಿಟ್ ಅವರ್ಯಾರು…’ ಎಂಬ ಮಾತಿನಂತೆ, ಟಿಕೆಟ್ ಗೆ ಅರ್ಜಿ ಸಲ್ಲಿಸಿದವರಿಗೆ ಅವಕಾಶ ದೊರಕಲಿದೆಯೇ? ಇಲ್ಲವೇ, ಕೊನೆ ಕ್ಷಣದಲ್ಲಿ ‘ಕೈ’ ಹಿಡಿಯುವವರಿಗೆ ವರಿಷ್ಠರು ಮಣೆ ಹಾಕಲಿದ್ದಾರೆಯೇ? ಎಂಬುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಪರಿಣಮಿಸಿದೆ!

‘ಕೈ’ ಟಿಕೆಟ್ ರೇಸ್ ನಲ್ಲಿ 11 ಮುಖಂಡರು : ಅಖಾಡಕ್ಕಿಳಿಯೋದು ಯಾರು?

*** ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ, ಸದ್ಯ ಕಾಂಗ್ರೆಸ್ ಪಕ್ಷದಿಂದ 11 ಜನ ಸ್ಪರ್ಧಾಕಾಂಕ್ಷಿಗಳು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪಾಲಿಕೆ ಕಾರ್ಪೋರೇಟರ್ ಹೆಚ್.ಸಿ.ಯೋಗೇಶ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎಂದು ಆ ಪಕ್ಷದ ಮೂಲಗಳು ಹೇಳುತ್ತವೆ. ಮೂವರಲ್ಲಿ ಓರ್ವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿತ್ತು. ಇದೀಗ ದಿಢೀರ್ ಆಗಿ ಕೈ ಟಿಕೆಟ್ ರೇಸ್ ನಲ್ಲಿ ಆಯನೂರು ಮಂಜುನಾಥ್ ಹೆಸರು ಕೇಳಿಬರಲಾರಂಭಿಸಿರುವುದು ಲೆಕ್ಕಾಚಾರಗಳು ತಲೆಕೆಳಗಾಗುವಂತೆ ಮಾಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *