ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಎ.13 ರಿಂದ ಆರಂಭವಾಗುವ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ದತೆ – ಚುನಾವಣಾಧಿಕಾರಿ ಮಾಹಿತಿ

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ. ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ, ಏ. 10 : ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ.

ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಕ್ಷೇತ್ರದಲ್ಲಿ 1,26,568 ಪುರುಷ, 1,32,334 ಮಹಿಳೆ ಮತ್ತು 14 ತೃತೀಯ ಲಿಂಗಿ ಸೇರಿದಂತೆ ಒಟ್ಟು 2,58,916 ಮತದಾರರಿದ್ದಾರೆ. 286 ಮತದಾನ ಕೇಂದ್ರಗಳಿದ್ದು, 8 ಹೆಚ್ಚುವರಿ ಮತದಾನ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆಯೋಗದಿಂದ ಅನುಮತಿ ದೊರೆತ ನಂತರದಲ್ಲಿ ಮತದಾನ ಕೇಂದ್ರ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಗುರುತಿನ ಚೀಟಿ ವಿತರಣೆ: ದಿನಾಂಕ 05-01-2022 ರ ಅಂತಿಮ ಮತದಾರರ ಪಟ್ಟಿ ಪ್ರಕಟವಾದ ನಂತರದಲ್ಲಿ ಹೊಸದಾಗಿ ಸೇರ್ಪಡೆಯಾದ ಮತದಾರರಿಗೆ, ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಈವರೆಗೆ ಸುಮಾರು 10,090 ಮತದಾರರ ಗುರುತಿನ ಚೀಟಿಗಳನ್ನು ಸ್ಪೀಡ್ ಪೊಸ್ಟ್  ಮೂಲಕ ಮತದಾರರಿಗೆ ರವಾನಿಸಿದೆ.

ಮತದಾರರ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ದಿನಾಂಕ: 11-04-2023 ಅಂತಿಮ ದಿನವಾಗಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಮತಗಟ್ಟೆ ಏಜೆಂಟರುಗಳ ಪಟ್ಟಿ:  ಭಾರತೀಯ ಜನತಾ ಪಾರ್ಟಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದವರು ಮತಗಟ್ಟೆ ಏಜೆಂಟರುಗಳ ಪಟ್ಟಿ ನೀಡಿದ್ದಾರೆ. ಜನತಾದಳ ಜಾತ್ಯಾತೀತ ಪಕ್ಷದವರು ಮತಗಟ್ಟೆ ಏಜೆಂಟರುಗಳ ಪಟ್ಟಿ ನೀಡಬೇಕಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಂಚೆ ಮತಪತ್ರ ವಿತರಣೆ: 80 ವರ್ಷ ವಯೋಮಾನ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಬಾಧಿತ ಮತದಾರರಿಗೆ ಅಂಚೆ ಮೂಲಕ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಸದರಿ ವ್ಯಕ್ತಿಗಳು ಮತದಾನ ಮಾಡುವ ಪ್ರಕ್ರಿಯೆಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ವೀಕ್ಷಿಸಲು ಅವಕಾಶವಿದೆ.

ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್: ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜ್ ಲ್ಲಿ 09-05-2022 ರಂದು ಮಸ್ಟರಿಂಗ್ ಮತ್ತು 10- 05-2022 ರಂದು ಡಿ ಮಸ್ಟರಿಂಗ್ ಕಾರ್ಯ ನಡೆಯಲಿದೆ.

ಸಹಾಯವಾಣಿ: ಮಹಾನಗರ ಪಾಲಿಕೆಯಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತ ಸಹಾಯವಾಣಿಯು 24*7 ಕಾರ್ಯನಿರ್ವಹಿಸುತ್ತಿದೆ. ಟೋಲ್‍ಫ್ರೀ ದೂರವಾಣಿ ಸಂಖ್ಯೆ: 1800-4257677 ಗೆ ಸಾರ್ವಜನಿಕರು, ಮತದಾರರು ಚುನಾವಣೆಗೆ ಸಂಬಂಧಿಸಿದ ಮಾದರಿ ನೀತಿ ಸಂಹಿತೆಯ ಅಥವಾ ಯಾವುದೇ ವಿಷಯಗಳ ಬಗ್ಗೆ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟ ಮತದಾರರಿಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ವೋಟರ್ ಸ್ಲಿಪ್‍ನ್ನು ವಿತರಿಸುತ್ತಾರೆ ಎಂದರು.

ಡಿವೈಎಸ್‍ಪಿ ಬಾಲರಾಜ್ ಮಾತನಾಡಿ, ನಾಮಪತ್ರ ಸಲ್ಲಿಕೆ ಆರಂಭ ದಿನಾಂಕದಿಂದ ಅಂತಿಮ ದಿನದವರೆಗೆ ಪಾಲಿಕೆ ಹಿಂದಿನ ಗೇಟ್‍ನ್ನು ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗುವುದು, ಪಾಲಿಕೆಯ ಇನ್ನೊಂದು ಗೇಟ್‍ನಿಂದ ಪ್ರವೇಶಿಸಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ದಲ್ಜೀತ್ ಕುಮಾರ್ ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *