shimoga | ಶಿವಮೊಗ್ಗ : ರಾಗಿಗುಡ್ಡ ಪ್ರಕರಣ – ಇಬ್ಬರು ಪೊಲೀಸ್ ವಶಕ್ಕೆ!
ಶಿವಮೊಗ್ಗ (shivamogga), ಜು. 6: ಶಿವಮೊಗ್ಗ ನಗರದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿನ ಉದ್ಯಾನವನವೊಂದರಲ್ಲಿದ್ದ ನಾಗರ ಮೂರ್ತಿ ಕಿತ್ತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಈ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು, ವ್ಯಾಟ್ಸಾಪ್ ಸಂದೇಶದಲ್ಲಿ ಮಾಹಿತಿ ನೀಡಿದ್ದಾರೆ. ‘ಘಟನೆ ಕುರಿಂತೆ ಪ್ರಕರಣ ದಾಖಲಿಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಕುರಿತಂತೆ ಯಾವುದೇ ಸುಳ್ಳು ಸುದ್ದಿ, ವದಂತಿ ಹರಡಬಾರದು. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
ಘಟನೆಯ ಹಿನ್ನೆಲೆ : ಬಂಗಾರಪ್ಪ ಬಡಾವಣೆಯ ನಿರ್ಮಾಣ ಹಂತದ ಕಟ್ಟಡವೊಂದರ ಮುಂಭಾಗವಿರುವ ಉದ್ಯಾನವನದಲ್ಲಿ, ದೇವರಮೂರ್ತಿಗಳ ಪ್ರತಿಷ್ಠಾಪಿಸಲಾಗಿತ್ತು. ಜು. 5 ರ ಸಂಜೆ ಕಿಡಿಗೇಡಿಗಳು ನಾಗರಕಲ್ಲನ್ನು ಕಿತ್ತು ಹಾಕಿದ್ದರು.
ಈ ವಿಷಯ ತಿಳಿದ ಸ್ಥಳೀಯ ನಿವಾಸಿಗಳು ಸ್ಥಳದಲ್ಲಿ ಜಮಾಯಿಸಿದ್ದು, ಕೆಲ ಸಮಯ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.
ರಾತ್ರಿಯೇ ಶಾಸಕ ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಭಾನುವಾರ ಬೆಳಿಗ್ಗೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ,ರವರು ಸ್ಥಳಕ್ಕೆ ಭೇಟಿ ನೀಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಪಹರೆಯ ವ್ಯವಸ್ಥೆ ಮಾಡಲಾಗಿದೆ.
Shivamogga, July 6: The police have taken two people into custody and are interrogating them intensively in connection with the case of the removal of a nagara statue from a open park in Bangarappa Layout, Ragigudda, Shivamogga city.
More Stories
shimoga news | ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ – ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ಪ್ರೀ ಪೇಯ್ಡ್ ಕೌಂಟರ್ : DC ಮಾಹಿತಿ
Auto rickshaw prepaid counters at KSRTC and private bus stands in Shivamogga city: DC information
ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ – ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್ : ಡಿಸಿ ಮಾಹಿತಿ
shimoga news | ಶಿವಮೊಗ್ಗ ನಗರದಲ್ಲಿ ಹೆಚ್ಚಾಗುತ್ತಿದೆ ಬೋರ್ವೆಲ್ ಗಳ ಕೊರೆತ : ಕಣ್ಮುಚ್ಚಿ ಕುಳಿತಿದೆಯೇ ಆಡಳಿತ?!
The number of borewells being drilled in Shivamogga city is increasing: Is the administration turning a blind eye?! *Is the focus shifting towards strengthening public drinking water supply?
ಶಿವಮೊಗ್ಗ ನಗರದಲ್ಲಿ ಹೆಚ್ಚಾಗುತ್ತಿದೆ ಬೋರ್ವೆಲ್ ಗಳ ಕೊರೆತ : ಕಣ್ಮುಚ್ಚಿ ಕುಳಿತ್ತಿದೆಯೇ ಆಡಳಿತ?! *ಸಾರ್ವಜನಿಕ ಕುಡಿಯುವ ನೀರು ಪೂರೈಕೆಯ ಬಲವರ್ಧನೆಯತ್ತ ಹರಿಯುವುದೆ ಚಿತ್ತ?
shimoga news | ಶಿವಮೊಗ್ಗ : ಸಮಾರಂಭಕ್ಕೆ ಹೋದ ತಾಯಿ – ಮಗಳು ನಾಪತ್ತೆ!
Shivamogga: Mother and daughter who went to a ceremony go missing!
ಶಿವಮೊಗ್ಗ : ಸಮಾರಂಭಕ್ಕೆ ಹೋದ ತಾಯಿ – ಮಗಳು ನಾಪತ್ತೆ!
shimog news | ಶಿವಮೊಗ್ಗ : ಮೊಬೈಲ್ ಶಾಪ್ ನಲ್ಲಿ ವ್ಯಕ್ತಿಗೆ ಚೂರಿ ಇರಿತ ಪ್ರಕರಣ – ಮೂವರ ಬಂಧನ!
Shivamogga: Man stabbed in mobile shop – Three arrested!
ಶಿವಮೊಗ್ಗ : ಮೊಬೈಲ್ ಶಾಪ್ ನಲ್ಲಿ ವ್ಯಕ್ತಿಗೆ ಚೂರಿ ಇರಿತ ಪ್ರಕರಣ – ಮೂವರ ಬಂಧನ!
shimoga news | ಶಿವಮೊಗ್ಗ : ಮನೆಯಿಂದ ಹೊರ ತೆರಳಿದ ವಿವಾಹಿತ ಯುವಕ ನಿಗೂಢ ಕಣ್ಮರೆ!
Shivamogga: A married young man who left home mysteriously disappears!
ಶಿವಮೊಗ್ಗ : ಮನೆಯಿಂದ ಹೊರ ತೆರಳಿದ ವಿವಾಹಿತ ಯುವಕ ನಿಗೂಢ ಕಣ್ಮರೆ!
ಶಿವಮೊಗ್ಗ : ತುಂಗಾ ನದಿಯಲ್ಲಿ ಈಜಲು ಹೋದ ಕಾಲೇಜು ವಿದ್ಯಾರ್ಥಿ ನೀರುಪಾಲು!
Shivamogga: A college student who went swimming in the Tunga River drowned! ಶಿವಮೊಗ್ಗ : ತುಂಗಾ ನದಿಯಲ್ಲಿ ಈಜಲು ಹೋದ ಕಾಲೇಜು ವಿದ್ಯಾರ್ಥಿ ನೀರುಪಾಲು!
