holehonnuru | ಹೊಳೆಹೊನ್ನೂರು ಪೊಲೀಸರ ಕಾರ್ಯಾಚರಣೆ : ನಕಲಿ ಬಂಗಾರ ನೀಡಿ ವಂಚಿಸಿದ್ದ ಇಬ್ಬರ ಬಂಧನ!

Holehonur police operation: Arrest of two people who cheated by giving fake gold! ಹೊಳೆಹೊನ್ನೂರು ಪೊಲೀಸರ ಕಾರ್ಯಾಚರಣೆ : ನಕಲಿ ಬಂಗಾರ ನೀಡಿ ವಂಚಿಸಿದ್ದ ಇಬ್ಬರ ಬಂಧನ!

ಭದ್ರಾವತಿ (bhadravati), ಆಗಸ್ಟ್ 14: ವ್ಯಕ್ತಿಯೋರ್ವರಿಗೆ ನಕಲಿ ಬಂಗಾರ ನೀಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪದ ಮೇರೆಗೆ, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸರು ಆಗಸ್ಟ್ 13 ರಂದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

ಶಿವಮೊಗ್ಗ ತಾಲೂಕಿನ ಹಾಡೋನಹಳ್ಳಿ ಗ್ರಾಮದ ನಿವಾಸಿ ಯಲ್ಲಪ್ಪ ಯಾನೆ ಮಾರಪ್ಪ (48) ಹಾಗೂ ಕರಿಬಸಪ್ಪ (48) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಬಂಧಿತರಿಂದ 5,05,000 ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಡಿವೈಎಸ್ಪಿ ನಾಗರಾಜ್ ಕೆ ಆರ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಶಿವಪ್ರಸಾದ್ ಎಂ, ಸಬ್ ಇನ್ಸ್’ಪೆಕ್ಟರ್ ಗಳಾದ ರಮೇಶ್, ಸಿಬ್ಬಂದಿಗಳಾದ ಹೆಚ್ ಸಿ ಅಣ್ಣಪ್ಪ ಪ್ರಸನ್ನ, ಪ್ರಕಾಶ್ ನಾಯ್ಕ್, ಮಂಜುನಾಥ್, ಪಿಸಿಗಳಾದ ವಿಶ್ವನಾಥ್ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.

ವಂಚನೆ : ಆರೋಪಿಗಳಿಬ್ಬರು ದೂರುದಾರರಾದ ರಾಯಭಾಗ್ ತಾಲೂಕಿನ ಮುಗಳಖೋಡ್ ಗ್ರಾಮದ ನಿವಾಸಿ, ಚಾಲಕ ವೃತ್ತಿಯ ಮಾರುತಿ ಭೀಮ್ ಶ್ರೀ ಎಂಬುವರಿಗೆ ಅಸಲಿ ಬಂಗಾರ ನೀಡುವುದಾಗಿ ನಂಬಿಸಿದ್ದರು.

ನಂತರ ಲಕ್ಷಾಂತರ ರೂಪಾಯಿ ಪಡೆದು, ನಕಲಿ ಬಂಗಾರ ನೀಡಿ ವಂಚಿಸಿದ್ದರು. ಈ ಕುರಿತಂತೆ ದೂರುದಾರರು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Bhadravati, August 13: On August 13, the police at Holehonnur in Bhadravati taluk succeeded in arresting two accused on the charge of cheating a person out of lakhs of rupees by giving them fake gold.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →