ಶಿವಮೊಗ್ಗ (shivamogga), ಆಗಸ್ಟ್ 29: ಭಾರೀ ಮಳೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ಆಗಸ್ಟ್ 29 ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಶುಕ್ರವಾರ ಬೆಳಿಗ್ಗೆ ಅವರು ವ್ಯಾಟ್ಸಾಪ್ ಸಂದೇಶದ ಮೂಲಕ ಪ್ರಕಟಣೆ ಹೊರಡಿಸಿದ್ದಾರೆ.
ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 29 ರಂದು ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆ ದಿನಗಳಂದು ಸರಿ ಹೊಂದಿಸಿಕೊಳ್ಳುವಂತೆ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shivamogga, August 29: In the wake of heavy rains, Tahsildar VS Rajeev has issued an order declaring a holiday on August 29 for Anganwadi centers, schools and colleges in Shivamogga taluk.

