ಮೂರನೇ ಪಟ್ಟಿಯಲ್ಲಿಯೂ ಪ್ರಕಟವಾಗದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು!

ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ, 10 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ. ಆದರೆ ಟಿ -20 ಕ್ರಿಕೆಟ್ ಮ್ಯಾಚ್ ನಷ್ಟೆ ಕುತೂಹಲ ಕೆರಳಿಸಿರುವ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಇದರಿಂದ ಕುತೂಹಲ ಮುಂದುವರಿಯುವಂತಾಗಿದೆ! ಪ್ರಸ್ತುತ ಶಿವಮೊಗ್ಗ ನಗರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ, ಬಿಜೆಪಿ ಪಕ್ಷ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ. ಉಳಿದ ಎಲ್ಲ ಕ್ಷೇತ್ರಗಳಿಗೆ ಕಣಕ್ಕಿಳಿಯುವ ಉಮೇದುವಾರರ ಹೆಸರು ಪ್ರಕಟಿಸಿದೆ.

-ಬಿ.ರೇಣುಕೇಶ್-

ಶಿವಮೊಗ್ಗ, ಎ. 17: ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ, 10 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ. ಆದರೆ ಟಿ – 20 ಕ್ರಿಕೆಟ್ ಮ್ಯಾಚ್ ನಷ್ಟೆ ಕುತೂಹಲ ಕೆರಳಿಸಿರುವ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಇದರಿಂದ ಕುತೂಹಲ ಮುಂದುವರಿಯುವಂತಾಗಿದೆ!

ಪ್ರಸ್ತುತ ಶಿವಮೊಗ್ಗ ನಗರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ, ಬಿಜೆಪಿ ಪಕ್ಷ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ. ಉಳಿದ ಎಲ್ಲ ಕ್ಷೇತ್ರಗಳಿಗೆ ಕಣಕ್ಕಿಳಿಯುವ ಉಮೇದುವಾರರ ಹೆಸರು ಪ್ರಕಟಿಸಿದೆ.

ಕುತೂಹಲ: ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಸದ್ಯ ಬಿಜೆಪಿ ಟಿಕೆಟ್ ರೇಸ್ ನಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್, ಬಿ.ಎಸ್.ಯಡಿಯೂರಪ್ಪ ಬೆಂಬಲಿಗ ಎಸ್.ಎಸ್.ಜ್ಯೋತಿಪ್ರಕಾಶ್, ಮಹಾನಗರ ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ಡಾ.ಧನಂಜಯ ಸರ್ಜಿ ಮೊದಲಾದವರ ಹೆಸರು ಮುಂಚೂಣಿಯಲ್ಲಿದೆ ಎಂದು ಹೇಳಲಾಗುತ್ತಿದೆ.

ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ ಅವರಿಗೆ ಟಿಕೆಟ್ ಖಚಿತ. ಹೆಸರು ಘೋಷಣೆಯಷ್ಟೆ ಬಾಕಿಯಿದೆ. ಈಗಾಗಲೇ ವರಿಷ್ಠರಿಂದ ಅವರಿಗೆ ಸಂದೇಶ ರವಾನಿಯಾಗಿದೆ ಎಂಬೆಲ್ಲ ಅಂತೆಕಂತೆಗಳು ಸ್ಥಳೀಯ ಬಿಜೆಪಿ ಪಾಳೇಯದಲ್ಲಿ ಹಬ್ಬಿದ್ದವು. ಈ ಕುರಿತಂತೆ ಚನ್ನಬಸಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಮೂರನೇ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರು ಪ್ರಕಟವಾಗಿಲ್ಲ.

ಇದರಿಂದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಕುರಿತಂತೆ ಮನೆ ಮಾಡಿರುವ ಕುತೂಹಲ ಮುಂದುವರಿಯುವಂತಾಗಿದೆ. ಯಾರಿಗೆ ಬಿಜೆಪಿ ಟಿಕೆಟ್ ದೊರಕಲಿದೆ ಎಂಬುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಪರಿಣಮಿಸಿದೆ.

ಒಟ್ಟಾರೆ 222 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಘೋಷಿಸಿದ ಬಿಜೆಪಿ

*** ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ, ಒಟ್ಟಾರೆ 224 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೂರು ಹಂತಗಳಲ್ಲಿ ಬಿಜೆಪಿ ಪಕ್ಷವು 222 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.

ಮೊದಲ ಪಟ್ಟಿಯಲ್ಲಿ 189 ಮತ್ತು ಎರಡನೇ ಪಟ್ಟಿಯಲ್ಲಿ 23 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿತ್ತು.  ಮೂರನೇ ಹಂತದಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಶಿವಮೊಗ್ಗ ನಗರ ಹಾಗೂ ಮಾನ್ವಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬೇಕಾಗಿದೆ.

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಶೆಟ್ಟರ್ ಎದುರು ಕಣಕ್ಕಿಳಿಯುತ್ತಿರುವವರು ಯಾರು?

*** ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಕಣಕ್ಕಿಳಿಯುತ್ತಿರುವ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ

ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಟೆಂಗಿನಕಾಯಿ ಅವರು ಅಖಾಡಕ್ಕಿಳಿಯುತ್ತಿದ್ದಾರೆ.

ಬಿಜೆಪಿ ಪ್ರಕಟಿಸಿದ 10 ಕ್ಷೇತ್ರಗಳ ಅಭ್ಯರ್ಥಿಗಳ ವಿವರ

  • ನಾಗಠಾಣ : ಸಂಜೀವ್‌ ಐಹೊಳೆ
  • ಸೇಡಂ : ರಾಜಕುಮಾರ್‌ ಪಾಟೀಲ್‌
  • ಕೊಪ್ಪಳ : ಮಂಜುಳಾ ಅಮರೇಶ್‌
  • ರೋಣ : ಕಳಕಪ್ಪ ಬಂಡಿ
  • ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ : ಮಹೇಶ್‌ ಟೆಂಗಿನಕಾಯಿ
  • ಹಗರಿಬೊಮ್ಮನಹಳ್ಳಿ : ಬಿ ರಾಮಣ್ಣ
  • ಹೆಬ್ಬಾಳ : ಕಟ್ಟಾ ಜಗದೀಶ್‌
  • ಗೋವಿಂದರಾಜನಗರ : ಉಮೇಶ್‌ ಶೆಟ್ಟಿ
  • ಮಹದೇವಪುರ : ಮಂಜುಳಾ ಅರವಿಂದ್‌ ಲಿಂಬಾವಳಿ
  • ಕೃಷ್ಣರಾಜ : ಶ್ರೀವತ್ಸಾ

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →