Thirthahalli: A young woman who left home for a college in Shimoga mysteriously disappears! ತೀರ್ಥಹಳ್ಳಿ : ಮನೆಯಿಂದ ಶಿವಮೊಗ್ಗದ ಕಾಲೇಜ್ ಗೆ ತೆರಳಿದ ಯುವತಿ ನಿಗೂಢ ಕಣ್ಮರೆ!

Thirthahalli | ತೀರ್ಥಹಳ್ಳಿ : ಮನೆಯಿಂದ ಶಿವಮೊಗ್ಗದ ಕಾಲೇಜ್ ಗೆ ತೆರಳಿದ ಯುವತಿ ನಿಗೂಢ ಕಣ್ಮರೆ!

ತೀರ್ಥಹಳ್ಳಿ (thirthahalli), ನವೆಂಬರ್ 15 : ಮನೆಯಿಂದ ಕಾಲೇಜ್ ಗೆ ತೆರಳಿದ ಯುವತಿಯೋರ್ವಳು, ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್ ಎಸ್ ಎಂಬುವವರ ಪುತ್ರಿ ಈಶಾನ್ಯ (19) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯು ನವೆಂಬರ್ 15 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಯುವತಿಯು ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ 2 ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದರು. ನವೆಂಬರ್ 10 ರಂದು ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ಯುವತಿ ಹೇಳಿ ಹೋಗಿದ್ದು, ನಂತರ ಕಣ್ಮರೆಯಾಗಿದ್ದಾರೆ. ಎಲ್ಲಿಯೂ ಸುಳಿವು ಲಭ್ಯವಾಗಿಲ್ಲ.

ಚಹರೆ : ಯುವತಿಯು 5 ಅಡಿ ಎತ್ತರ, ದೃಢವಾದ ಮೈಕಟ್ಟು, ದುಂಡು ಮುಖ, ಎಣ್ಣೆ ಕಪ್ಪು ಮೈ ಬಣ್ಣ, ತಲೆಯಲ್ಲಿ ಸುಮಾರು 14 ಇಂಚು ಉದ್ದದ ಕಪ್ಪು ಕೂದಲಿದ್ದು, ಎಡ ತುಟಿಯ ಮೇಲ್ಭಾಗ ರಾಗಿ ಕಾಳು ಗಾತ್ರದ ಕಪ್ಪುಮಚ್ಚೆ ಇರುತ್ತದೆ. ಕನ್ನಡ ಮಾತನಾಡಲು, ಓದಲು – ಬರೆಯಲು ತಿಳಿದಿದ್ದು ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಚೂಡಿದಾರ್ ಬಿಳಿ ಬಣ್ಣದ ವೇಲ್ ಧರಿಸಿರುತ್ತಾರೆ. ಹಾಗೂ ಒಂದು ಕಪ್ಪು ಬಣ್ಣದ ಸ್ಕೂಲ್ ಬ್ಯಾಗ್ ತೆಗೆದುಕೊಂಡು ಹೋಗಿರುತ್ತಾರೆ.

ಸದರಿ ಯುವತಿಯ ಮಾಹಿತಿ ಲಭ್ಯವಾದಲ್ಲಿ ಎಸ್.ಪಿ. ಶಿವಮೊಗ್ಗ -08182-261400, ಡಿವೈಎಸ್‌ಪಿ ತೀರ್ಥಹಳ್ಳಿ 08181 – 220388, ಸಿಪಿಐ ಮಾಳೂರು ವೃತ್ತ :- 9480803333/ಪಿಎಸ್‌ಐ ಆಗುಂಬೆ ರವರಿಗೆ :- 9480803314, ಕಂಟ್ರೋಲ್ ರೂ ಶಿವಮೊಗ್ಗ – 9480803300, ಇವರುಗಳನ್ನು ಸಂಪರ್ಕಿಸಿ ಮಾಹಿತಿಯನ್ನು ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Thirthahalli, November 15: A young woman who had gone to college from home has mysteriously disappeared. The incident took place under the jurisdiction of Agumbe Police Station in Thirthahalli taluk, Shimoga district.

children's day | Special article on Children's Day "Protection of children's rights is society's responsibility..." ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’ Author: Tajuddin Khan – President - Child Welfare Committee - Shivamogga ಲೇಖಕರು : ತಾಜುದ್ದೀನ್ ಖಾನ್ – ಅಧ್ಯಕ್ಷರು - ಮಕ್ಕಳ ಕಲ್ಯಾಣ ಸಮಿತಿ - ಶಿವಮೊಗ್ಗ Previous post children’s day | ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’
ಶಿವಮೊಗ್ಗ : ಎರಡು ಪ್ರತ್ಯೇಕ ದರೋಡೆ ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್! ಶಿವಮೊಗ್ಗ, ನವೆಂಬರ್ 15: ಶಿವಮೊಗ್ಗದಲ್ಲಿ ನಡೆದ ಎರಡು ಪ್ರತ್ಯೇಕ ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿನೋಬನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಪೊಲೀಸ್ ಇಲಾಖೆ ಪ್ರಕಟಣೆ ಬಿಡುಗಡೆ ಮಾಡಿದ್ದು, ವಿವರ ಈ ಮುಂದಿನಂತಿದೆ. ಪ್ರಕರಣ 1 : 14/10/2025 ರಂದು ಬೆಳಿಗ್ಗೆ 4 ಗಂಟೆ ಸಮಯದಲ್ಲಿ ನವುಲೆಯ ಶಿವಬಸವನಗರ ಕ್ರಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರನ್ನು, ಬೈಕ್ ನಲ್ಲಿ ಆಗಮಿಸಿದ ಅಪರಿಚಿತನೋರ್ವ ಅಡ್ಡಗಟ್ಟಿ ಬೆದರಿಕೆ ಹಾಕಿದ್ದ. ನಂತರ ಅವರ ಬಳಿಯಿದ್ದ ಬಂಗಾರದ ಉಂಗುರ ಹಾಗೂ ಹಣ ಅಪಹರಿಸಿ ಪರಾರಿಯಾಗಿದ್ದ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಮ್ಮನಕಟ್ಟೆ ರಸ್ತೆ ನವುಲೆಯ ನಿವಾಸಿ ಸಚಿನ್ ಯಾನೆ ಶಾಡೋ (27) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 7.90 ಗ್ರಾಂ ತೂಕದ ಬಂಗಾರದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಪಲ್ಸರ್ ಬೈಕ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ 2 : ಆಲ್ಕೋಳದ ಮಂಗಳ ಮಂದಿರ ರಸ್ತೆಯಲ್ಲಿ 25/10/2025 ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಮನೆ ಮುಂಭಾಗ ರಂಗೋಲಿ ಹಾಕುತ್ತಿದ್ದ ಮಹಿಳೆಯೋರ್ವರ ಬಳಿ, ವಿಳಾಸ ಕೇಳುವ ನೆಪದಲ್ಲಿ ಆಗಮಿಸಿದ ಬೈಕ್ ಸವಾರನೋರ್ವ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ. ಈ ಸಂಬಂಧ ಬೊಮ್ಮನಕಟ್ಟೆಯ ಎಂಬಿಎಸ್ ಲೇಔಟ್ ನಿವಾಸಿ ಭುವನೇಶ್ವರ ಯಾನೆ ಭುವನ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 13 ಗ್ರಾಂ ತೂಕದ ಬಂಗಾರದ ಸರ, ಕೃತ್ಯಕ್ಕೆ ಉಪಯೋಗಿಸಿ ಸ್ಪ್ಲೆಂಡರ್ ಪ್ಲಸ್ ಬೈಕ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆ : ಎರಡು ಪ್ರಕರಣಗಳ ಪತ್ತೆಗೆ ಎಸ್ಪಿ ಜಿ ಕೆ ಮಿಥುನ್ ಕುಮಾರ್, ಎಎಸ್ಪಿಗಳಾದ ಕಾರಿಯಪ್ಪ, ರಮೇಶ್, ಡಿವೈಎಸ್ಪಿ ಸಂಜೀವ್ ಕುಮಾರ್ ಮಾರ್ಗದರ್ಶನದಲ್ಲಿ ವಿನೋಬನಗರ ಠಾಣೆ ಇನ್ಸ್’ಪೆಕ್ಟರ್ ಸಂತೋಷ್ ಕುಮಾರ್ ಡಿ ಕೆ ಉಸ್ತುವಾರಿಯಲ್ಲಿ, ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಜಿ, ಸಿಬ್ಬಂದಿಗಳಾದ ರಾಜು ಕೆ ಆರ್, ಮನುಶಂಕರ್, ಮಲ್ಲಪ್ಪ ಎಸ್ ಜಿ, ಅರುಣ್ ಕುಮಾರ್ ಎಸ್ ಕೆ ರವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. Next post shimoga crime news | ಶಿವಮೊಗ್ಗ : ಪ್ರತ್ಯೇಕ ದರೋಡೆ ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್!