bhadravati news | ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
ಭದ್ರಾವತಿ (bhadravathi), ಡಿಸೆಂಬರ್ 12: ಪ್ರೀತಿಯ ವಿಚಾರದಲ್ಲಿ ಉಂಟಾದ ವಿವಾದವು, ಇಬ್ಬರ ಕೊಲೆಯಲ್ಲಿ ಅಂತ್ಯಗೊಂಡ ಆಘಾತಕಾರಿ ಘಟನೆ, ಭದ್ರಾವತಿ ನಗರದ ಜೈ ಭೀಮ್ ನಗರದಲ್ಲಿ ಡಿಸೆಂಬರ್ 12 ರ ಸಂಜೆ ನಡೆದಿದೆ.
ಕಿರಣ್ (25) ಹಾಗೂ ಮಂಜುನಾಥ್ (65) ಕೊಲೆಗೀಡಾದವರೆಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹಳೇನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರಣವೇನು? : ಯುವಕ ನಂದೀಶ್ ಹಾಗೂ ಯುವತಿ ಸೃಷ್ಟಿ ಎಂಬುವರು ಪ್ರೀತಿಸುತ್ತಿದ್ದು, ಕಳೆದೆರೆಡು ದಿನಗಳ ಹಿಂದೆ ಪರಾರಿಯಾಗಿದ್ದರು. ಇವರಿಬ್ಬರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದರು. ಡಿಸೆಂಬರ್ 12 ರ ಸಂಜೆ ಅವರು ಭದ್ರಾವತಿಗೆ ಹಿಂದಿರುಗಿದ್ದು, ಹಳೇನಗರ ಪೊಲೀಸ್ ಠಾಣೆಗೆ ಆಗಮಿಸಿದ್ದರು.
ಈ ವೇಳೆ ಯುವತಿಯು ಯುವಕನೊಂದಿಗೆ ಹೋಗುವುದಾಗಿ ತಿಳಿಸಿದ್ದಾಳೆ. ಸದರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೇಮಿಗಳಿಗೆ ಬೆಂಬಲವಾಗಿ ನಿಂತಿದ್ದಾರೆಂದು ಕಿರಣ್ ಹಾಗೂ ಮತ್ತೋರ್ವ ಯುವಕನೊಂದಿಗೆ, ಯುವತಿಯ ಸಹೋದರ ಮತ್ತು ಆತನ ಸ್ನೇಹಿತರು ಜೈ ಭೀಮ್ ನಗರದಲ್ಲಿ ಗಲಾಟೆ ಮಾಡಿದ್ದಾರೆ.
ಚೂರಿಯಿಂದ ಇರಿದಿದ್ದಾರೆ. ಈ ವೇಳೆ ಗಲಾಟೆ ಬಿಡಿಸಲು ತೆರಳಿದ್ದ ಮಂಜುನಾಥ್ ಅವರಿಗೂ ಆರೋಪಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಿರಣ್ ಹಾಗೂ ಮಂಜುನಾಥ್ ಅವರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.
Bhadravati, December 12: A shocking incident that resulted in the murder of two people due to a dispute over love took place on the evening of December 12 in Jai Bhim Nagar, Bhadravati city.
More Stories
bhadravati news | ಭದ್ರಾವತಿಯಲ್ಲಿ ಅಸ್ಸಾಂ ರಾಜ್ಯದ ಮಹಿಳೆಯ ನಿಗೂಢ ಕಣ್ಮರೆ!
The mysterious disappearance of a woman from Bhadravati!
ಭದ್ರಾವತಿಯ ಆಲೆಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ನಿಗೂಢ ಕಣ್ಮರೆ!
job news | ಉದ್ಯೋಗ ಮಾಹಿತಿ | ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Job Information | Applications invited for the posts of Anganwadi workers and helpers in Shivamogga and Bhadravati taluks
ಉದ್ಯೋಗ ಮಾಹಿತಿ | ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
bhadravati news | ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
Woman’s body found in Bhadra River in Bhadravati city!
ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
bhadravati news | ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
Caste abuse, assault case : Bhadravati man sentenced to 4 years rigorous imprisonment!
ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
bhadravati | ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ : ನಾಗರೀಕರ ಆತಂಕ!
‘Chaddi gang’ roaming in Bhadravati: Citizens worried!
ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ!
bhadravati | ಭದ್ರಾವತಿ : ಮನೆಯಲ್ಲಿ ಕಳ್ಳತನ – ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
Theft at home in Bhadravati: Two accused from Bengaluru arrested!
ಭದ್ರಾವತಿಯಲ್ಲಿ ಮನೆಯಲ್ಲಿ ಕಳ್ಳತನ : ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
