ಬಾಡಿಗೆ ಮನೆಯವರಿಗೂ ಉಚಿತ ವಿದ್ಯುತ್ ಸೌಲಭ್ಯ : ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಬಾಡಿಗೆ ಮನೆಯವರಿಗೂ ಉಚಿತ ವಿದ್ಯುತ್ ಸೌಲಭ್ಯ : ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಬೆಂಗಳೂರು, ಜೂ. 6: ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೂ ಉಚಿತ ವಿದ್ಯುತ್‌ ಸೌಲಭ್ಯ ದೊರಕಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಗೃಹಜ್ಯೋತಿ ಯೋಜನೆಯ ಮಾರ್ಗಸೂಚಿ ಪ್ರಕಟವಾದ ಬಳಿಕ, ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್‌ ಸೌಲಭ್ಯ ಲಭ್ಯವಾಗುವುದಿಲ್ಲ ಎಂಬ ಗೊಂದಲಗಳು ಮನೆ ಮಾಡಿದ್ದವು. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆಡೆ ಮಾಡಿಕೊಟ್ಟಿತ್ತು.

ಮಂಗಳವಾರ ವಿಧಾನಸೌಧದಲ್ಲಿ ಡಿ ದೇವರಾಜು ಅರಸು ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು.

ಉದಯ ಸಾಕ್ಷಿ ನ್ಯೂಸ್

 200 ಯೂನಿಟ್‌ ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯವಾಗಲಿದೆ. ಆದರೆ ವಾಣಿಜ್ಯವಾಗಿ ಬಳಕೆ ಮಾಡುವವರಿಗೆ ಉಚಿತ ವಿದ್ಯುತ್‌ ಅನ್ವಯ ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ವಿರುದ್ದ ಟೀಕೆ: ವಿದ್ಯುತ್ ದರ ಏರಿಕೆ ವಿರುದ್ದ ಬಿಜೆಪಿ ಪಕ್ಷ ನಡೆಸುತ್ತಿರುವ ಪ್ರತಿಭಟನೆಗೆ ಸಿಎಂ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರಿಗೆ ಯಾವುದೇ ವಿಷಯವಿಲ್ಲವಾಗಿದೆ. ಅವರು ಅಧಿಕಾರದಲ್ಲಿದ್ದಾಗ ಹೇಳಿದ ಯಾವುದೇ ಕೆಲಸ ಮಾಡಿಲಿಲ್ಲ. ಭ್ರಷ್ಟಾಚಾರ ನಡೆಸಿದರು. ಈಗ ನಮಗೆ ಪಾಠ ಹೇಳಲು ಬರುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.

ನಾವು ಅಧಿಕಾರಕ್ಕೆ ಬಂದ ಕೇವಲ 15 ದಿವಸದಲ್ಲಿಯೇ ರಾಜ್ಯದ ನಾಗರೀಕರಿಗೆ ನೀಡಿದ್ದ ಭರವಸೆಯಂತೆ ಎಲ್ಲ 5 ಗ್ಯಾರಂಟಿಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದವೆ ಎಂದು ಹೇಳಿದ್ದಾರೆ.

ಗೊಂದಲ ಮೂಡಿಸಿದ್ದ ಗೃಹ ಜ್ಯೋತಿ ಯೋಜನೆ ಮಾರ್ಗಸೂಚಿ..!

ಪ್ರತಿ ಮನೆಗೆ ಗರಿಷ್ಠ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ‘ಗೃಹ ಜ್ಯೋತಿ’ ಯೋಜನೆಗೆ ಸಂಬಂಧಿಸಿದಂತೆ ಸರಕಾರ ಮಾರ್ಗಸೂಚಿ ಪ್ರಕಟಿಸಿತ್ತು.

ಬಾಡಿಗೆ ಮನೆಯವರಿಗೂ ಉಚಿತ ವಿದ್ಯುತ್ ಸೌಲಭ್ಯ : ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಗೃಹ ವಿದ್ಯುತ್‌ ಬಳಕೆದಾರರ ಹೆಸರಿನಲ್ಲಿಒಂದಕ್ಕಿಂತ ಹೆಚ್ಚು ಸ್ಥಾವರ (ಮೀಟರ್) ಗಳಿದ್ದರೆ ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಲಾಗಿತ್ತು. ಇದರಿಂದ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಗೃಹ ಜ್ಯೋತಿ ಯೋಜನೆ ಸೌಲಭ್ಯ ಲಭ್ಯವಾಗದಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿತ್ತು.  

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →