ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ – ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ!
ಶಿಕಾರಿಪುರ, ಜೂ. 8: ವಿವಿಧೆಡೆ ಬೈಕ್ ಕಳವು ಮಾಡಿದ್ದ ಆರೋಪದ ಮೇರೆಗೆ, ಓರ್ವನನ್ನು ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಶಿರಾಳಕೊಪ್ಪ ಪಟ್ಟಣದ ನೆಹರು ಕಾಲೋನಿ ನಿವಾಸಿ ಜಿಯಾವುಲ್ಲಾ ಯಾನೆ ಜಿಯಾ (31) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ 1.19 ಲಕ್ಷ ರೂ. ಮೌಲ್ಯದ 3 ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿರಾಳಕೊಪ್ಪದ ಬಸ್ ನಿಲ್ದಾಣದ ಬಳಿ ಸ್ಪ್ಲೆಂಡರ್ ಬೈಕ್ ವೊಂದು ಕಳವು ಮಾಡಲಾಗಿತ್ತು. ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ವೇಳೆ, ಜಿಯಾವುಲ್ಲಾನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು.
ಆರೋಪಿಯು ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿ, ದಾವಣಗೆರೆ ಜಿಲ್ಲೆಯ ಬಸವನಗರ ಠಾಣಾ ವ್ಯಾಪ್ತಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದೊಂದು ಬೈಕ್ ಕಳವು ಮಾಡಿದ್ದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.
ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಶಿವಾನಂದ ಮದರಕಂಡಿ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ರುದ್ರೇಶ್, ಸಬ್ ಇನ್ಸ್’ಪೆಕ್ಟರ್ ಮಂಜುನಾಥ್ ಕುರಿ ಮತ್ತವರ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿದ್ದಾರೆ.
More Stories
shikaripura news | ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ!
A tumor weighing 12.5 kg was in the woman’s stomach: Shikaripura government hospital doctors successfully operated!
ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ!
shikaripura news | ಶಿಕಾರಿಪುರ : ಜಮೀನಿನಲ್ಲಿ ಗಾಂಜಾ ಬೆಳೆ ಪತ್ತೆ ಹಚ್ಚಿದ ಪೊಲೀಸರು!
Shikaripura: Police discover marijuana crop in a farm!
ಶಿಕಾರಿಪುರ : ಜಮೀನಿನಲ್ಲಿ ಗಾಂಜಾ ಬೆಳೆ ಪತ್ತೆ ಹಚ್ಚಿದ ಪೊಲೀಸರು!
shikaripura | ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
Attack on Kotipura KSRTC Bus Conductor of Shikaripura Taluk – What is the reason?
ಶಿಕಾರಿಪುರ ತಾಲೂಕಿನ ಕೋಟಿಪುರ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
shikaripura | ಶಿಕಾರಿಪುರ | ದೇವಾಲಯಕ್ಕೆ ಹೊರಟವರು ಮಸಣಕ್ಕೆ..! : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!!
ಶಿಕಾರಿಪುರ : shikaripura – Those who went to the temple ended up in the cemetery: A young man and a young woman who were engaged to be married met a tragic end!
ದೇವಾಲಯಕ್ಕೆ ಹೊರಟವರು ಸ್ಮಶಾನಕ್ಕೆ : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!
shiralkoppa news | ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
Mysterious disappearance of a fishmonger in Shiralakoppa Shikaripura taluk!
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
shikaripura | ಕಳ್ಳತನ ಪ್ರಕರಣ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ – ಓರ್ವ ಅರೆಸ್ಟ್!
Theft case: Gold ornaments worth lakhs of rupees seized – one arrested!
ಕಳ್ಳತನ ಪ್ರಕರಣ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ – ಓರ್ವ ಅರೆಸ್ಟ್!
