ಅಸೆಂಬ್ಲಿ ಎಲೆಕ್ಷನ್ : ಶಿವಮೊಗ್ಗದಲ್ಲಿ ಆರ್.ಎ.ಎಫ್. ರೌಂಡ್ಸ್!

ಶಿವಮೊಗ್ಗ, ಜ. 18: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಚಟುವಟಿಕೆಗಳು ಕ್ರಮೇಣ ಕಾವೇರಲಾರಂಭಿಸಿದೆ. ಈಗಾಗಲೇ ಆಡಳಿತಯಂತ್ರವು ಚುನಾವಣಾ ಪೂರ್ವಭಾವಿ ಸಿದ್ದತೆ ನಡೆಸಲಾರಂಭಿಸಿದೆ.

ಈ ನಡುವೆ ಜಿಲ್ಲೆಯ ಪ್ರಮುಖ ಹಾಗೂ ಸೂಕ್ಷ್ಮ ಪ್ರದೇಶಗಳ ಪರಿಚಯ ಹಾಗೂ ಭದ್ರತೆಯ ಉದ್ದೇಶದಿಂದ, ಕ್ಷಿಪ್ರ ಕಾರ್ಯಾಚರಣೆ ಪಡೆ ಶಿವಮೊಗ್ಗಕ್ಕೆ ಆಗಮಿಸಿದೆ.

ಬುಧವಾರ ಶಿವಮೊಗ್ಗ ನಗರದ ವಿವಿಧೆಡೆ, ಆರ್.ಎ.ಎಫ್ ಪಡೆಯು ಪ್ರದೇಶಗಳ ಪರಿಚಯ ಹಾಗೂ ಅವಲೋಕನಕ್ಕಾಗಿ ಪಥ ಸಂಚಲನ ನಡೆಸಿತು. ಕೆಳಗಿನ ತುಂಗಾನಗರದಿಂದ ಆರಂಭವಾದ ಪಥ ಸಂಚಲನವು ಕೆ.ಕೆ.ಶೆಡ್, ಪದ್ಮಾ ಟಾಕೀಸ್, ಟಿಪ್ಪುನಗರ, ವಿಜಯಾ ಗ್ಯಾರೇಜ್, ಗಜಾನನ ಗೇಟ್,

ಸೀಗೆಹಟ್ಟಿ, ಕುಂಬಾರ ಬೀದಿ, ಕೆ.ಆರ್.ಪುರಂ, ಸಿದ್ದಯ್ಯ ಸರ್ಕಲ್, ಎಂಕೆಕೆ ರಸ್ತೆ, ಎ ಎ ಸರ್ಕಲ್, ಎಸ್.ಎಸ್. ಸರ್ಕಲ್, ಗಾಂಧಿಬಜಾರ್, ಅಶೋಕ ರಸ್ತೆ, ಶಿವಾಜಿ ಸರ್ಕಲ್, ಲಷ್ಕರ್ ಮೊಹಲ್ಲಾ, ಓಲ್ಡ್ ಬಾರ್ ಲೈನ್ ರಸ್ತೆ ಮೂಲಕ ಕೋಟೆ ಪೊಲೀಸ್ ಠಾಣೆ ಬಳಿ ಅಂತ್ಯಗೊಂಡಿತು.

ಪಥ ಸಂಚಲನದಲ್ಲಿ ಆರ್.ಎ.ಎಫ್. ಅಸಿಸ್ಟೆಂಟ್ ಕಮಾಂಡೆಂಟ್ ನವೀನ್, ಶಿವಮೊಗ್ಗ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಬಾಲರಾಜ್, ನಯನ ನಂದಿ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *