ಮನೆಯಲ್ಲಿ ಕಳ್ಳತನ ಪ್ರಕರಣ : ಆರೋಪಿ ಬಂಧನ

ಮನೆಯಲ್ಲಿ ಕಳ್ಳತನ ಪ್ರಕರಣ : ಆರೋಪಿ ಬಂಧನ

ಶಿವಮೊಗ್ಗ, ಜೂ. 24: ಮನೆಯೊಂದರಲ್ಲಿ ನಗದು, ಚಿನ್ನಾಭರಣ, ಮೊಬೈಲ್ ಪೋನ್ ಕಳವು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ.

ಶಿವಮೊಗ್ಗದ ಸೂಳೇಬೈಲು ಸಮೀಪದ ಈದ್ಗಾನಗರದ ನಿವಾಸಿ ತೌಸೀಫ್ ಯಾನೆ ತೌಸೀಫ್’ವುಲ್ಲಾ ಯಾನೆ ಟೈಗರ್ (24) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಜೂ. 23 ರಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ 1.48 ಲಕ್ಷ ರೂ. ಮೌಲ್ಯದ 33 ಗ್ರಾಂ 850 ಮಿಲಿ ತೂಕದ ಚಿನ್ನದ ಆಭರಣಗಳು, ಒಂದು ಮೊಬೈಲ್ ಫೋನ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ದೊಡ್ಡಪೇಟೆ ಠಾಣೆ ಇನ್ಸ್’ಪೆಕ್ಟರ್ ಅಂಜನ್ ಕುಮಾರ್, ಸಬ್ ಇನ್ಸ್’ಪೆಕ್ಟರ್ ವಸಂತ್ ಹೆಚ್.ಸಿ., ಉಮಾ ಪಾಟೀಲ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಘಟನೆ ಹಿನ್ನಲೆ: ಜೂ. 6 ರಂದು ಶಿವಮೊಗ್ಗದ ಅಶೋಕನಗರ ಬಡಾವಣೆಯ ಮನೆಯೊಂದರ ಬಾಗಿಲು ಮುರಿದು ಒಳ ಪ್ರವೇಶಿಸಿ, ಗ್ರಾಡ್ರೇಜ್ ಬೀರುವಿನಲ್ಲಿದ್ದ ಚಿನ್ನಾಭರಣ – ನಗದು – ಮೊಬೈಲ್ ಫೋನ್ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *