ಪುಂಡ ಪೋಕರಿಗಳ ಅಡ್ಡೆಯಾಗುತ್ತಿರುವ ಸರ್ಕಾರಿ ಶಾಲಾ ಆವರಣ : ಗಮನಹರಿಸುವುದೆ ಸ್ಮಾರ್ಟ್ ಸಿಟಿ ಆಡಳಿತ?

ಪುಂಡ ಪೋಕರಿಗಳ ಅಡ್ಡೆಯಾಗುತ್ತಿರುವ ಸರ್ಕಾರಿ ಶಾಲಾ ಆವರಣ : ಗಮನಹರಿಸುವುದೆ ಸ್ಮಾರ್ಟ್ ಸಿಟಿ ಆಡಳಿತ?

ಕೋಟ್ಯಾಂತರ ರೂ. ವೆಚ್ಚದಲ್ಲಿ ಕಟ್ಟಡ ನವೀಕರಣ : ಆದರೆ ದುರಸ್ತಿಯಾಗದ ಶಾಲೆಯ ಕಾಂಪೌಂಡ್ ಗೋಡೆ..!

ಶಿವಮೊಗ್ಗ, ಜೂ. 27: ಶಿವಮೊಗ್ಗದ ಕರ್ನಾಟಕ ಸಂಘ ಸಮೀಪದ ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗೋಡೆ ಅವ್ಯವಸ್ಥೆಯಿಂದ, ರಾತ್ರಿ ವೇಳೆ ಹಾಗೂ ರಜಾ ದಿನಗಳಂದು ಶಾಲಾ ಆವರಣವು ಪುಂಡ ಪೋಕರಿಗಳ ಅಡ್ಡೆಯಾಗುತ್ತಿದೆ. ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿವರ್ತಿತವಾಗುತ್ತಿದೆ!

ಸ್ಮಾರ್ಟ್ ಸಿಟಿ ಆಡಳಿತವು ಕೋಟ್ಯಾಂತರ ರೂ. ವೆಚ್ಚದಲ್ಲಿ ಶಾಲಾ ಕಟ್ಟಡದ ನವೀಕರಣ ಕಾಮಗಾರಿ ನಡೆಸಿದೆ. ಶಾಲಾ ಕಾಂಪೌಂಡ್ ಗೆ ಹೊಂದಿಕೊಂಡಂತೆ ಸರ್ ಎಂ.ವಿಶ್ವೇಶ್ವರಯ್ಯರವರ ಪ್ರತಿಮೆ ನಿರ್ಮಾಣ ಮಾಡಿದೆ.

ಪುಂಡ ಪೋಕರಿಗಳ ಅಡ್ಡೆಯಾಗುತ್ತಿರುವ ಸರ್ಕಾರಿ ಶಾಲಾ ಆವರಣ : ಗಮನಹರಿಸುವುದೆ ಸ್ಮಾರ್ಟ್ ಸಿಟಿ ಆಡಳಿತ?

ಕಾಮಗಾರಿ ವೇಳೆ ಹಲವೆಡೆ ಶಾಲೆಯ ಕಾಂಪೌಂಡ್ ಗೋಡೆ ಹಾನಿಯಾಗಿತ್ತು. ಶಾಲೆಗೆ ಪ್ರವೇಶ ಕಲ್ಪಿಸುವ ಮುಖ್ಯ ದ್ವಾರದ ಗೇಟ್ ಕೂಡ ದುರಸ್ತಿಗೀಡಾಗಿತ್ತು. ಆದರೆ ಗೋಡೆಯ ದುರಸ್ತಿಗೆ ಕ್ರಮಕೈಗೊಂಡಿರಲಿಲ್ಲ. ಇದರಿಂದ ಶಾಲಾ ಆವರಣದೊಳಗೆ ಅನದಿಕೃತ ವ್ಯಕ್ತಿಗಳು ಪ್ರವೇಶಿಸುತ್ತಿದ್ದಾರೆ. ಹೇಳುವವರು ಕೇಳುವವರು ಯಾರು ಇಲ್ಲದಂತಾಗಿದೆ.

ಸ್ಮಾರ್ಟ್ ಸಿಟಿ ಎಂಜಿನಿಯರ್ ಗಳ ನಿರ್ಲಕ್ಷ್ಯ ಧೋರಣೆಯಿಂದ, ಇದೀಗ ಶಾಲಾ ಆವರಣವು ಪುಂಡಪೋಕರಿಗಳ ಅಡ್ಡೆಯಾಗುವಂತಾಗಿದೆ. ತಕ್ಷಣವೇ ಸ್ಮಾರ್ಟ್ ಸಿಟಿ ಆಡಳಿತ ಶಾಲಾ ಕಾಂಪೌಂಡ್ ದುರಸ್ತಿಗೆ ಕ್ರಮಕೈಗೊಳ್ಳಬೇಕಾಗಿದೆ ಎಂದು ಶಾಲೆಯ ಹಳೇಯ ವಿದ್ಯಾರ್ಥಿ ಸಂಘ ಆಗ್ರಹಿಸಿದೆ.

ಹಳೇಯ ವಿದ್ಯಾರ್ಥಿ ಸಂಘಟನೆಯಿಂದ ಸ್ಮಾರ್ಟ್ ಸಿಟಿ ಎಂಡಿಗೆ ಮನವಿ

*** ಮೇನ್ ಮಿಡ್ಲು ಸ್ಕೂಲ್ ಶಾಲೆಯ ಕಾಂಪೌಂಡ್ ಗೋಡೆ ದುರಸ್ತಿಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ, ಶಾಲೆಯ ಹಳೇಯ ವಿದ್ಯಾರ್ಥಿ ಸಂಘಟನೆಯು ಮಂಗಳವಾರ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಎಂಡಿ ಚಿದಾನಂದ ವಟಾರೆಯವರಿಗೆ ಮನವಿ ಪತ್ರ ಅರ್ಪಿಸಿದೆ.

ಹಳೇಯ ವಿದ್ಯಾರ್ಥಿ ಸಂಘಟನೆಯಿಂದ ಸ್ಮಾರ್ಟ್ ಸಿಟಿ ಎಂಡಿಗೆ ಮನವಿ

ಸ್ಮಾರ್ಟ್ ಸಿಟಿಯಿಂದ ನಡೆಸಿದ ನವೀಕರಣ ಕಾಮಗಾರಿ ವೇಳೆ, ಹಲವೆಡೆ ಕಾಂಪೌಂಡ್ ಗೋಡೆಗೆ ಹಾನಿಯಾಗಿತ್ತು. ಕಾಮಗಾರಿ ಪೂರ್ಣಗೊಂಡ ನಂತರ ಕಾಂಪೌಂಡ್ ದುರಸ್ತಿಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಆದರೆ ಕಾಮಗಾರಿ ಪೂರ್ಣಗೊಂಡ ನಂತರ ಕಾಂಪೌಂಡ್ ಗೋಡೆ ದುರಸ್ತಿ ಮಾಡದೆ ಹಾಗೆಯೇ ಬಿಡಲಾಗಿತ್ತು. ಇದೀಗ ಶಾಲಾ ಆವರಣಕ್ಕೆ ಅನದಿಕೃತ ವ್ಯಕ್ತಿಗಳು ಪ್ರವೇಶಿಸುತ್ತಿದ್ದಾರೆ. ಅನೈತಿಕ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.

ಕಾಲಮಿತಿಯೊಳಗೆ ಶಾಲೆಯ ಕಾಂಪೌಂಡ್ ಗೋಡೆ ದುರಸ್ತಿಗೆ ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ. ಮನವಿ ಅರ್ಪಿಸುವ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ, ಉಪಾಧ್ಯಕ್ಷ ಪರಶುರಾಮ, ರಾಮು ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →