ಮಠದ ಸ್ವಾಮೀಜಿ ಎಂದು ಹೇಳಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ..!

ಮಠದ ಸ್ವಾಮೀಜಿ ಎಂದು ಹೇಳಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಅಪರಿಚಿತರ ತಂಡ!

ಶಿವಮೊಗ್ಗ, ಜು. 13: ಹೊನ್ನಾಳ್ಳಿ ತಾಲೂಕಿನ ಸಾಸ್ವೆಹಳ್ಳಿ ಸಮೀಪದ ರಾಂಪುರ ಮಠದ ಸ್ವಾಮೀಜಿ ಎಂದು ಹೇಳಿಕೊಂಡು ಕಾರಿನಲ್ಲಿ ಆಗಮಿಸಿದ ಅಪರಿಚಿತರ ತಂಡವೊಂದು, ನಾಗರೀಕರಿಂದ ಹಣ ವಸೂಲಿ ಮಾಡಿಕೊಂಡು ತೆರಳಿರುವ ಘಟನೆ ಶಿವಮೊಗ್ಗದ ವಿವಿಧೆಡೆ ಇತ್ತೀಚೆಗೆ ನಡೆದಿದೆ.

ನಗರದ ಹೊರವಲಯ ಬಸವನಗಂಗೂರು ಗ್ರಾಮ, ಕೆ.ಹೆಚ್.ಬಿ. ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಯ ಕೆಲ ಮನೆಗಳಿಗೆ ಖಾವಿ ಬಟ್ಟೆ ಧರಿಸಿದ್ದ ವ್ಯಕ್ತಿ ಸೇರಿದಂತೆ ಕೆಲ ಸಹಚರರು ಐಷಾರಾಮಿ ಕಾರಿನಲ್ಲಿ ಆಗಮಿಸಿದ್ದಾರೆ. ಎಲ್ಲರೂ ಮಧ್ಯವಯಸ್ಕರಾಗಿದ್ದು, ಮಠದ ಸ್ವಾಮೀಜಿ ಹಾಗೂ ಅವರ ಭಕ್ತರು ಎಂದು ಸಾರ್ವಜನಿಕರಿಗೆ ಪರಿಚಯಿಸಿಕೊಂಡಿದ್ದಾರೆ.

‘ಕಾರಿನಲ್ಲಿ ಆಗಮಿಸಿ ಸ್ವಾಮೀಜಿ ಬಂದಿದ್ದಾರೆಂದು ನೇರವಾಗಿ ಮನೆಯೊಳಗೆ ಬಂದರು. ಮಠದ ಆವರಣದಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕಾಗಿ ದೇಣಿಗೆ ಸಂಗ್ರಹಿಸಲು ಆಗಮಿಸಿರುವುದಾಗಿ ಹೇಳಿದರು.

5 ಸಾವಿರ ರೂ. ನೀಡುವಂತೆ, ಸಿಮೆಂಟ್ ಮತ್ತೀತರ ವಸ್ತುಗಳನ್ನು ಕೊಡಿಸುವಂತೆ ಒತ್ತಡ ಹಾಕಿದರು. ತಮ್ಮ ಬಳಿ ಅಷ್ಟೊಂದು ಹಣವಿಲ್ಲವೆಂದು ಹೇಳಿ 500 ರೂ. ನೀಡಿ ಕಳುಹಿಸಲಾಯಿತು’ ಎಂದು ಕೆ.ಹೆಚ್.ಬಿ ಕಾಲೋನಿಯ ಮನೆಯೊಂದರ ನಿವಾಸಿಯೋರ್ವರು ಮಾಹಿತಿ ನೀಡಿದ್ದಾರೆ.

ಮಠದವರಲ್ಲ: ಈ ಕುರಿತಂತೆ ರಾಂಪುರ ಮಠದ ಸದ್ಗುರು ಶಿವಯೋಗಿ ಶಿವಕುಮಾರ  ಹಾಲಸ್ವಾಮೀಜಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಯಾರೋ ದುರುದ್ದೇಶದಿಂದ ಮಠದ ಹೆಸರೇಳಿಕೊಂಡು ಹಣ ಸಂಗ್ರಹಿಸುತ್ತಿದ್ದಾರೆ. ಇಂತವರು ಬಂದಾಗ ಯಾವುದೇ ಹಣ, ವಸ್ತುಗಳನ್ನು ಕೊಡಬೇಡಿ. ಇವರ ಬಗ್ಗೆ ಮಠಕ್ಕೆ ಮಾಹಿತಿ ನೀಡುವಂತೆ’  ಸಾರ್ವಜನಿಕರಿಗೆ ಹಾಗೂ ಮಠದ ಭಕ್ತರಿಗೆ ಮನವಿ ಮಾಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *