ಭಾರೀ ಮಳೆಯಿಂದ ರಸ್ತೆ – ತಡೆಗೋಡೆ ಕುಸಿತ : ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಶಿವಮೊಗ್ಗ ಡಿಸಿ ಆದೇಶ!

ಭಾರೀ ಮಳೆಯಿಂದ ರಸ್ತೆ - ತಡೆಗೋಡೆ ಕುಸಿತ : ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಶಿವಮೊಗ್ಗ ಡಿಸಿ ಆದೇಶ!

ಶಿವಮೊಗ್ಗ, ಜು. 27:  ಧಾರಾಕಾರ ಮಳೆ ಮತ್ತು ಭಾರೀ ವಾಹನಗಳ ಸಂಚಾರದಿಂದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯ 6, 7 ಮತ್ತು 11 ನೇ ತಿರುವಿನ ಹಲವೆಡೆ ಸಣ್ಣ ಬಿರುಕುಗಳಾಗಿವೆ. ರಸ್ತೆ ಕುಸಿತವಾಗಿದೆ. ಜೊತೆಗೆ ತಡೆಗೋಡೆಗೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಿ ಡಾ.ಆರ್.ಸೆಲ್ವಮಣಿ ಅವರು  ಆದೇಶಿಸಿದ್ದಾರೆ.

27-07-2023 ರಿಂದ 15-09-2023 ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಭಾರೀ ವಾಹನಗಳು, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಆದೇಶಿಸಲಾಗಿದೆ. ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರೀ ವಾಹನಗಳು ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ ಮಾರ್ಗದ ಮೂಲಕ

ಹಾಗೂ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ ಮಾರ್ಗಗಳ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಗುರುವಾರ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →