ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ!

ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ!

ಶಿವಮೊಗ್ಗ, ಸೆ. 6: ಶಿವಮೊಗ್ಗ ತಾಲೂಕಿನ ಗೆಜ್ಜೇನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದ ಜಮೀನುಗಳ ಬಳಿ ಇತ್ತೀಚೆಗೆ ಕಾಣಿಸಿಕೊಂಡು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹೆಣ್ಣು ಚಿರತೆಯೊಂದು ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಬಿದ್ದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಬೋನಿಗೆ ಬಿದ್ದಿರುವ ಚಿರತೆಗೆ ಸರಿಸುಮಾರು 4 ರಿಂದ 5 ವರ್ಷ ವಯೋಮಾನವಿದೆ. ಕಳೆದ ಹಲವು ದಿನಗಳಿಂದ ಚಿರತೆಯು ಸಮೀಪದ ಹೊಲಗದ್ದೆಗಳ ಬಳಿ ಓಡಾಡಿಕೊಂಡಿತ್ತು. ಕಳೆದ ಕೆಲ ದಿನಗಳ ಹಿಂದೆ ಜಮೀನಿನ ಮನೆಯೊಂದರ ಬಳಿಯಿದ್ದ ನಾಯಿಯನ್ನು ಬೇಟೆಯಾಡಿ ಸಾಯಿಸಿತ್ತು.

ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಚಿರತೆ ಸೆರೆಗಾಗಿ ಅದು ಓಡಾಡುವ ಸ್ಥಳದಲ್ಲಿ ಬೋನಿಟ್ಟಿತ್ತು. ಸ್ಥಳಕ್ಕೆ ಶಂಕರ ಅರಣ್ಯ ವಲಯದ ಆರ್.ಎಫ್.ಓ ಸುಧಾಕರ್ ಮತ್ತವರ ಸಿಬ್ಬಂದಿಗಳು ಭೇಟಿ ನೀಡಿದ್ದರು.

‘ಕಳೆದ ಹಲವು ತಿಂಗಳುಗಳಿಂದ ಜಮೀನುಗಳ ಸುತ್ತಮುತ್ತ ಚಿರತೆಗಳು ಓಡಾಡುತ್ತಿದ್ದವು. ಈ ಕುರಿತಂತೆ ಅರಣ್ಯ ಇಲಾಖೆ ಗಮನಕ್ಕೆ ತಂದರೂ ಗಮನಹರಿಸಿರಲಿಲ್ಲ. ನಾಯಿಗಳನ್ನು ಬೇಟೆಯಾಡಿ ಸಾಯಿಸಿದ ನಂತರ, ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಬೋನಿಟ್ಟು ಚಿರತೆ ಸೆರೆ ಹಿಡಿದಿದೆ. ಇನ್ನೂ ಒಂದು ಚಿರತೆಯಿರುವ ಅನುಮಾನವಿದ್ದು, ಅರಣ್ಯ ಇಲಾಖೆ ಸೂಕ್ತ ಗಮನಹರಿಸಬೇಕು’ ಎಂದು ಗೆಜ್ಜೇನಹಳ್ಳೀ ಗ್ರಾಮ ಪಂಚಾಯ್ತಿ ಸದಸ್ಯ ದೂದ್ಯನಾಯ್ಕ್ ಅವರು ಆಗ್ರಹಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *