ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ, ಸೆ. 7: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 27 ನೇ ವಾರ್ಡ್ ಮಿಳಘಟ್ಟದ ಕೆ.ಎಸ್.ಆರ್.ಟಿ.ಸಿ ಡಿಪೋ ಸಮೀಪ, ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂತೆ ಮಾರುಕಟ್ಟೆ ಕಟ್ಟಡವು ಪಾಳು ಬೀಳಲಾರಂಭಿಸಿದೆ. ಅನೈತಿಕ ಚಟುವಟಿಕೆಗಳ ತಾಣವಾಗಲಾರಂಭಿಸಿದೆ.

ಖಾಸಗಿ ಬಸ್ ನಿಲ್ದಾಣ ಸಮೀಪದ ಮಿಳಘಟ್ಟ ಮುಖ್ಯ ರಸ್ತೆಯಲ್ಲಿ ಪ್ರತಿ ಮಂಗಳವಾರ ನಡೆಯುವ ಸಂತೆಯನ್ನು, ಸದರಿ ಕಟ್ಟಡಕ್ಕೆ ಸ್ಥಳಾಂತರಿಸಬೇಕಾಗಿದೆ. ಆದರೆ ವಿಳಂಬಗತಿಯ ಕಾಮಗಾರಿ, ಪಾಲಿಕೆ ಆಡಳಿತದ ನಿರ್ಲಕ್ಷ್ಯ ಧೋರಣೆಯಿಂದ ಇಲ್ಲಿಯವರೆಗೂ ಕಟ್ಟಡ ಕಾರ್ಯಾರಂಭಗೊಂಡಿಲ್ಲ.

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಸದ್ಯ ಕೆ.ಎಸ್.ಆರ್.ಟಿ.ಸಿ ಡಿಪೋ ಕ್ವಾಟರ್ಸ್ ಪಕ್ಕದ ಕಟ್ಟಡವು ರಾತ್ರಿ ವೇಳೆ ಮದ್ಯ ವ್ಯಸನಿಗಳ ಹಾಗೂ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸುತ್ತಾರೆ.

ಸ್ಥಳಾಂತರವಾಗಬೇಕು: ಮಿಳಘಟ್ಟ ಮುಖ್ಯ ರಸ್ತೆಯಲ್ಲಿ ನಡೆಯುವ ಸಂತೆಯಿಂದ, ಜನ – ವಾಹನ ಸಂಚಾರಕ್ಕೆ ತೀವ್ರ ಅಡೆತಡೆಯಾಗಿ ಪರಿಣಮಿಸುತ್ತಿದೆ. ಅಪಘಾತಗಳು ಸಂಭವಿಸುತ್ತಿವೆ. ಸಾರ್ವಜನಿಕರಿಗೆ ತೀವ್ರ ಕಿರಿಕಿರಿಯಾಗುತ್ತಿದೆ ಎಂಬ ಕಾರಣದಿಂದ ಸಂತೆ ಸ್ಥಳಾಂತರಕ್ಕೆ ಪಾಲಿಕೆ ಆಡಳಿತ ನಿರ್ಧರಿಸಿತ್ತು.

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಕೆ.ಎಸ್.ಆರ್.ಟಿ.ಸಿ. ಡಿಪೋ ಸಮೀಪವಿದ್ದ ಪಾಲಿಕೆ ಜಾಗದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಸಂತೆ ಮಾರುಕಟ್ಟೆ ಸ್ಥಾಪನೆಗೆ ನಿರ್ಧರಿಸಿತ್ತು. ಅದರಂತೆ ಸರಿಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಸಲಾಗಿದೆ. ಆದರೆ ವರ್ಷಗಳೇ ಉರುಳಿದರೂ ಇಲ್ಲಿಯವರೆಗೂ ಕಟ್ಟಡ ಕಾರ್ಯಾರಂಭಗೊಂಡಿಲ್ಲ.

‘ಕಾಲಮಿತಿಯೊಳಗೆ ಕ್ರಮಕೈಗೊಳ್ಳಲು ಸೂಚಿಸಿದ್ದೆನೆ’ : ಕಾರ್ಪೋರೇಟರ್ ವಿಶ್ವನಾಥ್

‘ತಮ್ಮ ವಾರ್ಡ್ ನಲ್ಲಿ ನಿರ್ಮಿಸಲಾಗುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ ಕಾರ್ಯಾರಂಭಕ್ಕೆ ಕಾಲಮಿತಿಯೊಳಗೆ ಕ್ರಮಕೈಗೊಳ್ಳುವಂತೆ ಈಗಾಗಲೇ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದೆನೆ’ ಎಂದು 27 ನೇ ವಾರ್ಡ್ ಕಾರ್ಪೋರೇಟರ್ ವಿಶ‍್ವನಾಥ‍್ ಅವರು ತಿಳಿಸಿದ್ದಾರೆ. ಗುರುವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಮ್ಮ ಅಧಿಕಾರವಧಿಯೊಳಗೆ ಸಂತೆ ಮಾರುಕಟ್ಟೆ ಆರಂಭಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ವಿಶ್ವನಾಥ‍್ ಅವರು ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *