
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು – ಹಲವರಿಗೆ ಗಾಯ!
ಶಿವಮೊಗ್ಗ, ಸೆ. 9: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ, ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಜಾವಳ್ಳಿ ಬಳಿ ಗುರುವಾರ ಸಂಭವಿಸಿದೆ.

ಶಿವಮೊಗ್ಗದ ಇಲಿಯಾಸ್ ನಗರದ ನಿವಾಸಿ ಅಫ್ತಾಬ್ ಬಾಷಾ (40) ಹಾಗೂ ಬಾಲಕಿ ಮದೀನಾ (12) ಮೃತಪಟ್ಟವರೆಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅವರ ಕುಟುಂಬ ಸದಸ್ಯರು ಹಾಗೂ ಮತ್ತೊಂದು ಕಾರಿನಲ್ಲಿದ್ದವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಫ್ತಾಬ್ ಬಾಷಾ ಅವರು ಕುಟುಂಬ ಸದಸ್ಯರೊಂದಿಗೆ, ಶಿವಮೊಗ್ಗದಿಂದ ಚೆನ್ನಗಿರಿಗೆ ತೆರಳುತ್ತಿದ್ದರು. ಮತ್ತೊಂದು ಕಾರು ಚಿತ್ರದುರ್ಗದ ಕಡೆಯಿಂದ ಶಿವಮೊಗ್ಗದೆಡೆಗೆ ಬರುತ್ತಿದ್ದು, ಸದರಿ ಕಾರಿನಲ್ಲಿ ಮೂರು ಜನರಿದ್ದು ಅವರೆಲ್ಲರು ಬೆಂಗಳೂರಿನ ನಿವಾಸಿಗಳಾಗಿದ್ದಾರೆ ಎಂದು ಹೇಳಲಾಗಿದೆ.

ಅಪಘಾತದ ರಭಸಕ್ಕೆ ಎರಡು ಕಾರುಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಒಂದು ಕಾರು ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದಿದೆ. ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ವಿವರದ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.

More Stories
shimoga | ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೆರೆಗಳಿಗೆ ತುಂಗಾ ನದಿ ನೀರು : MLA ಶಾರದಾ ಪೂರ್ಯನಾಯ್ಕ್ ಸಂತಸ
Tunga River water for lakes in Shivamogga rural constituency : MLA sharada puryanaik happy
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೆರೆಗಳಿಗೆ ತುಂಗಾ ನದಿ ನೀರು : ಶಾಸಕಿ ಶಾರದಾ ಪೂರ್ಯನಾಯ್ಕ್ ಸಂತಸ
ಚಿರತೆ ಹಾವಳಿಗೆ ಭಯಭೀತರಾದ ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿ ಗ್ರಾಮಸ್ಥರು! : ಗಮನಹರಿಸುವುದೆ ಅರಣ್ಯ ಇಲಾಖೆ?
ಚಿರತೆ ಹಾವಳಿಗೆ ಭಯಭೀತರಾದ ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿ ಗ್ರಾಮಸ್ಥರು! : ಗಮನಹರಿಸುವುದೆ ಅರಣ್ಯ ಇಲಾಖೆ?
ಭೀಕರ ರಸ್ತೆ ಅಪಘಾತ : ಮೂವರು ಕಾಲೇಜ್ ವಿದ್ಯಾರ್ಥಿಗಳ ದಾರುಣ ಸಾವು – ಓರ್ವನಿಗೆ ಗಂಭೀರ ಗಾಯ!
ಶಿವಮೊಗ್ಗ, ಅ. 1: ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ – ಅರಹತೊಳಲು ಗ್ರಾಮಗಳ ನಡುವೆ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಬೈಕ್ ವೊಂದರಲ್ಲಿದ್ದ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟು ಮತ್ತೊಂದು ಬೈಕ್ ನಲ್ಲಿದ್ದ ಯುವಕ ಗಾಯಗೊಂಡ ಘಟನೆ ನಡೆದಿದೆ.
ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು!
ಶಿವಮೊಗ್ಗ, ಆ. 21: ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಧ್ವಂಸಗೊಳಿಸಿರುವ ಘಟನೆ, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದ್ದು, ಸೋಮವಾರ...
ಸಹಕಾರಿ ಕ್ಷೇತ್ರ ರಾಜಕೀಯದಿಂದ ಹೊರತಾಗಿರಬೇಕು : ಶಾಸಕಿ ಶಾರದಾ ಪೂರ್ಯಾನಾಯ್ಕ್
‘ಯಾವುದೇ ಸಹಕಾರಿ ಕ್ಷೇತ್ರ ರಾಜಕೀಯದಿಂದ ದೂರವಿರಬೇಕು’ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹೇಳಿದ್ದಾರೆ.
ಹೊಳೆಹೊನ್ನೂರು ಮೀಪದ ಅರಹತೊಳಲು ಗ್ರಾಮದಲ್ಲಿ ನಡೆದ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಗೋದಾಮು ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರ ಮಾತನಾಡಿದರು.
ಶಿವಮೊಗ್ಗ : ಆ.11 – 12 ರಂದು ಆಯನೂರು, ಕುಂಸಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಹೊಸದಾಗಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ನಿರ್ಮಿಸಲಾಗುತ್ತಿದ್ದು, ಟ್ಯಾಪಿಂಗ್ ಗೋಪುರದ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಈ ಕೆಳಕಂಡ ಗ್ರಾಮಗಳಲ್ಲಿ 11-08-2023 ಮತ್ತು 12-08-2023 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.