ಹವಾಮಾನ ವೈಪರೀತ್ಯ : ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಆಗದೆ ಬೆಂಗಳೂರಿಗೆ ಹಿಂದಿರುಗಿದ ವಿಮಾನ!

ಹವಾಮಾನ ವೈಪರೀತ್ಯ : ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಆಗದೆ ಬೆಂಗಳೂರಿಗೆ ಹಿಂದಿರುಗಿದ ವಿಮಾನ!

ಶಿವಮೊಗ್ಗ, ಅ. 2: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ ಇಂಡಿಗೋ ಸಂಸ್ಥೆಯ ಪ್ರಯಾಣಿಕ ವಿಮಾನವು, ಹವಾಮಾನ ವೈಪರೀತ್ಯ ಕಾರಣದಿಂದ ಲ್ಯಾಂಡಿಂಗ್ ಆಗದೆ, ಮತ್ತೇ ಬೆಂಗಳೂರಿಗೆ ಹಿಂದಿರುಗಿದ ಘಟನೆ ಅ. 1 ರಂದು ನಡೆದಿದೆ.

ಎಂದಿನಂತೆ ಅ. 1 ರಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟ ವಿಮಾನವು, ನಿಗದಿತ ಅವಧಿಗೆ ಶಿವಮೊಗ್ಗಕ್ಕೆ ಆಗಮಿಸಿದೆ. ರನ್ ವೇಯಲ್ಲಿ ಗಾಳಿಯ ವೇಗ ಹೆಚ್ಚಿದ್ದ ಕಾರಣದಿಂದ, ವಿಮಾನಕ್ಕೆ ಲ್ಯಾಂಡಿಂಗ್ ಆಗಲು ಎಟಿಸಿ ಕೇಂದ್ರದಿಂದ ಗ್ರೀನ್ ಸಿಗ್ನಲ್ ದೊರಕಿಲ್ಲ.

ಹಲವು ನಿಮಿಷಗಳ ಕಾಲ ವಿಮಾನವು ಆಕಾಶದಲ್ಲಿಯೇ ಸುತ್ತು ಹಾಕಿದೆ. ಲ್ಯಾಂಡಿಂಗ್ ಗೆ ಗ್ರೀನ್ ಸಿಗ್ನಲ್ ದೊರಕಿಲ್ಲ. ಹಾಗೆಯೇ ವಿಮಾನದಲ್ಲಿನ ಇಂಧನ ಪ್ರಮಾಣವೂ ಕೂಡ ಕಡಿಮೆಯಾಗುತ್ತಿದ್ದ ಕಾರಣದಿಂದ, ಮತ್ತೇ ಬೆಂಗಳೂರಿಗೆ ಹಿಂದಿರುಗಿದೆ ಎಂದು ತಿಳಿದುಬಂದಿದೆ.

ನಂತರ ಅದೇ ವಿಮಾನವು ಮಧ್ಯಾಹ್ನ ಸುಮಾರಿಗೆ 1.30 ಕ್ಕೆಶಿವಮೊಗ್ಗಕ್ಕೆ ಆಗಮಿಸಿದೆ. ಈ ವೇಳೆಗಾಗಲೇ ಗಾಳಿಯ ವೇಗ ಕಡಿಮೆಯಾಗಿದ್ದ ಕಾರಣದಿಂದ, ವಿಮಾನ ಲ್ಯಾಂಡಿಂಗ್ ಆಗಲು ಗ್ರೀನ್ ಸಿಗ್ನಲ್ ದೊರಕಿದೆ ಎಂದು ಹೇಳಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *