ಶಿವಮೊಗ್ಗ, ಅ. 6: ಶಿವಮೊಗ್ಗ ನಗರದಲ್ಲಿ ಅ. 7 ಮತ್ತು 8 ರಂದು ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ಆಡಳಿತ ಶುಕ್ರವಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಮೆಸ್ಕಾಂ ಸಂಸ್ಥೆಯು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ, ನಗರದ ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅ. 7 ಮತ್ತು 8 ರಂದು ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮಂಡಳಿಯೊಂದಿಗೆ ಸೂಕ್ತ ಸಹಕಾರ ನೀಡುವಂತೆ ಜಲ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮನವಿ ಮಾಡಿದ್ದಾರೆ.
