ಸ್ಮಶಾನದ ಬಳಿ ಗುತ್ತಿಗೆದಾರನಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ!

ಶಿವಮೊಗ್ಗ, ಅ. 13: ಸ್ಮಶಾನವೊಂದರ ಬಳಿ ಗುತ್ತಿಗೆದಾರರೋರ್ವರಿಂದ ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು, ಲಂಚದ ಹಣದ ಸಮೇತ ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಶಿವಮೊಗ್ಗ ತಾಲೂಕಿನ ಬುಕ್ಲಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಶಿವಮೊಗ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ಗೋಪಿನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ. ಲೋಕಾಯುಕ್ತ ಎಸ್ಪಿ ಎನ್. ವಾಸುದೇವರಾಮ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್, ಇನ್ಸ್’ಪೆಕ್ಟರ್ ಸುರೇಶ್, ಪ್ರಕಾಶ್ ಮತ್ತವರ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

ಲಂಚಕ್ಕೆ ಡಿಮ್ಯಾಂಡ್: ದೂರುದಾರ ಕಾಟಿಕೆರೆ ಗ್ರಾಮದ ಉಪ ಗುತ್ತಿಗೆದಾರ ಜಿ. ರವಿಕುಮಾರ್ ಎಂಬುವರು, ರಾಮಿನಕೊಪ್ಪ ಹಾಗೂ ಬುಕ್ಲಾಪುರ ಸ್ಮಶಾನ ಅಭಿವೃದ್ದಿ ಕಾಮಗಾರಿ ನಿರ್ವಹಿಸಿದ್ದರು. ಬುಕ್ಲಾಪುರ ಸ್ಮಶಾನ ಅಭಿವೃದ್ದಿ ಕಾಮಗಾರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 10 ಲಕ್ಷ ರೂ. ಮಂಜೂರಾಗಬೇಕಾಗಿತ್ತು.

ಈ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ, ರವಿಕುಮಾರ್ ಅವರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಸ್.ಗೋಪಿನಾಥ್ ಅವರಿಗೆ ಮನವಿ ಮಾಡಿದ್ದರು. 15 ಸಾವಿರ ರೂ. ಲಂಚ ನೀಡುವಂತೆ ಎಸ್.ಗೋಪಿನಾಥ್ ಡಿಮ್ಯಾಂಡ್ ಮಾಡಿದ್ದರು. ಈ ಸಂಬಂಧ ರವಿಕುಮಾರ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಶುಕ್ರವಾರ ಬುಕ್ಲಾಪುರ ಸ್ಮಶಾನದ ಬಳಿ ಸ್ಥಳ ಪರಿಶೀಲನೆಗಾಗಿ ಅಧಿಕಾರಿ ಎಸ್.ಗೋಪಿನಾಥ್ ಆಗಮಿಸಿದ್ದು, ಈ ವೇಳೆ ಸದರಿ ಗುತ್ತಿಗೆದಾರನಿಂದ 15 ಸಾವಿರ ರೂ. ಪಡೆದಿದ್ದಾರೆ. ‘ಈ ವೇಳೆ ದಾಳಿ ನಡೆಸಿ ಲಂಚದ ಹಣದ ಸಮೇತ ಅಧಿಕಾರಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ‘ ಎಂದು ಲೋಕಾಯುಕ್ತ ಸಂಸ್ಥೆಯು ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *