ರೈಲಿನಿಂದ ಕೆಳಕ್ಕೆ ಬಿದ್ದು ಅಪರಿಚಿತ ಯುವಕ ಸಾವು!

ಶಿವಮೊಗ್ಗ, ಅ. 25 : ಚಲಿಸುವ ರೈಲಿನಿಂದ ಯುವಕನೋರ್ವ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ, ಶಿವಪುರ – ಬೀರೂರು ರೈಲು ನಿಲ್ದಾಣಗಳ ನಡುವಿನ ಪ್ರದೇಶದಲ್ಲಿ ಅ. 25 ರಂದು ನಡೆದಿದೆ.

ಕಿ.ಮೀ ಸಂಖ್ಯೆ 02-900-03/000 ರಲ್ಲಿ ದುರಂತ ಸಂಭವಿಸಿದೆ. ಮೃತನಿಗೆ ಸುಮಾರು 22 ವರ್ಷ ವಯಸ್ಸಿದೆ. ರೈಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಚಿಕಿತ್ಸೆಗಾಗಿ ಬೀರೂರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುತ್ತಾನೆ.

ಮೃತನು ಸುಮಾರು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ತಲೆಯಲ್ಲಿ ಸುಮಾರು 3 ಇಂಚು ಉದ್ದದ ಕಪ್ಪು ಕೂದಲಿದೆ.

ಸುಮಾರು 1 ಇಂಚು ಉದ್ದದ ಗಡ್ಡ ಮೀಸೆ ಬಿಟ್ಟಿರುತ್ತಾನೆ. ಕಪ್ಪು ಬಣ್ಣದ ತುಂಬು ತೋಳಿನ ಶರ್ಟ್, ಆಕಾಶ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಶವವನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಶೈತ್ಯಾಗಾರದಲ್ಲಿ ಇರಿಸಲಾಗಿದೆ.

ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ದೂ.ಸಂ: 08182-222974, 9480802124 ನ್ನು ಸಂಪರ್ಕಿಸಬಹದು ಎಂದು ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

ರೈಲಿಗೆ ಸಿಲುಕಿ ಅನಾಮಧೇಯ ಪುರುಷ ಸಾವು!

ಶಿವಮೊಗ್ಗ, ಅ. 26: ಚಲಿಸುವ ರೈಲಿಗೆ ಸಿಲುಕಿ ಅನಾಮಧೇಯ ಪುರುಷ ಮೃತಪಟ್ಟ ಘಟನೆ ಶಿವಮೊಗ್ಗದ ವಿದ್ಯಾನಗರ ಸಮೀಪ ಅ. 25 ರಂದು ನಡೆದಿದೆ.

ಭದ್ರಾವತಿಯಿಂದ ಶಿವಮೊಗ್ಗದೆಡೆಗೆ ಆಗಮಿಸುತ್ತಿದ್ದ ರೈಲು ಗಾಡಿ ಸಂಖ್ಯೆ – 20651 ಕ್ಕೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾನೆ. ಕಿ.ಮೀ  59/700-800 ರಲ್ಲಿ ಈ ದುರಂತ ಸಂಭವಿಸಿದೆ.

ಮೃತ ವ್ಯಕ್ತಿಗೆ ಸುಮಾರು 45 ವರ್ಷ ವಯೋಮಾನವಿದೆ. 4 ಅಡಿ ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ತಲೆಯಲ್ಲಿ 2 ಇಂಚು ಕಪ್ಪು ಕೂದಲು, ಅರ್ಧ ಇಂಚು ಕಪ್ಪು ಮೀಸೆ ಇರುತ್ತದೆ.

ಬಿಳಿ ಬಣ್ಣದ ತುಂಬು ತೋಳಿನ ಶರ್ಟ್, ಅದರ ಮೇಲೆ ಪ್ಲಸ್ ಆಕಾರದ ನೀಲಿ ಕಲರ್‍ನ ಗೆರೆ ಇರುತ್ತದೆ. ಬಿಳಿ ಬಣ್ಣದ ಕ್ರಾಸ್ ಬನಿಯನ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಶವವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಶೈತ್ಯಾಗಾರದಲ್ಲಿ ಇರಿಸಲಾಗಿದೆ.

ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ದೂ.ಸಂ: 08182-222974, 9480802124 ನ್ನು ಸಂಪರ್ಕಿಸಬಹದು ಎಂದು ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *