ಶಿವಮೊಗ್ಗ ಅರಣ್ಯ ಇಲಾಖೆ ಕಾರ್ಯಾಚರಣೆ : ಲಕ್ಷಾಂತರ ರೂ. ಮೌಲ್ಯದ ನಾಟಾ ವಶ – ಓರ್ವನ ಬಂಧನ!

Shimoga Forest Department operation ಶಿವಮೊಗ್ಗ ಅರಣ್ಯ ಇಲಾಖೆ ಕಾರ್ಯಾಚರಣೆ : ಆರೋಪಿ ಸಮೇತ ಲಕ್ಷಾಂತರ ರೂ. ಮೌಲ್ಯದ ನಾಟಾ ವಶ!

ಶಿವಮೊಗ್ಗ, ನ. 11: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ನಾಟಾ ಕಳ್ಳ ಸಾಗಾಣೆ ಮಾಡುತ್ತಿದ್ದ ಪ್ರಕರಣವೊಂದನ್ನು ಅರಣ್ಯ ಇಲಾಖೆ (ಶಂಕರ ವಲಯ) ಪತ್ತೆ ಹಚ್ಚಿದ್ದು, ಲಕ್ಷಾಂತರ ರೂ. ಮೌಲ್ಯದ ಮರದ ತುಂಡುಗಳನ್ನು ವಶಕ್ಕೆ ಪಡೆದ ಘಟನೆ ಶನಿವಾರ ನಡೆದಿದೆ.

ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ನಿವಾಸಿ ಸಯ್ಯದ್ ಅಜೀಜ್ ಉರ್ ರೆಹಮಾನ್ ಬಂಧಿತ ಆರೋಪಿ. ಬುಲೆರೋ ಪಿಕಪ್ ವಾಹನದಲ್ಲಿ ಆರೋಪಿಯು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ನಾಟಾ ತರುತ್ತಿರುವ ಕುರಿತಂತೆ ಶಿವಮೊಗ್ಗ ಅರಣ್ಯ ಇಲಾಖೆಯ ಶಂಕರ ವಲಯ ವಿಭಾಗದ ಅಧಿಕಾರಿಗಳಿಗೆ  ಖಚಿತ ವರ್ತಮಾನ ಲಭಿಸಿತ್ತು.

ಶನಿವಾರ ಬೆಳಿಗ್ಗೆ ಶಿವಮೊಗ್ಗದ ಹೊರವಲಯ ಹೊಳೆಹೊನ್ನೂರು ರಸ್ತೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ, ಮಾಲು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬೀಟೆ ಮರ ಹಾಗೂ ಅತ್ಯಂತ ಅಪರೂಪದ ಕರಿಮರ  (ಡಯಾಸ್ಪರಸ್ ಸೆಬನಮ) ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಕರಿಮರದ ಮೌಲ್ಯ ಎಷ್ಟೆಂಬುವುದು ಇನ್ನಷ್ಟೆ ತಿಳಿದುಬರಬೇಕಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಶಂಕರ ವಲಯದ ವಲಯ ಅರಣ್ಯಾಧಿಕಾರಿ ಸುಧಾಕರ್ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *