ಸಕ್ರೆಬೈಲು ಆನೆ ಬಿಡಾರದ ಆನೆ ಬಾಲಕ್ಕೆ ಗಾಯ ಪ್ರಕರಣ : ಇಬ್ಬರು ಕಾವಾಡಿಗಳು ಸಸ್ಪೆಂಡ್!

ಶಿವಮೊಗ್ಗ, ನ. 13: ಸಕ್ರೆಬೈಲು ಆನೆ ಬಿಡಾರದ ಆನೆಯೊಂದರ ಬಾಲಕ್ಕೆ ಉಂಟಾಗಿದ್ದ ಗಾಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಆನೆ ಬಿಡಾರದ ಇಬ್ಬರು ಕಾವಾಡಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಕಳೆದ ಅಕ್ಟೋಬರ್ 17 ರಂದು ಭಾನಾಮತಿ ಆನೆ ಕಾಡಿಗೆ ಮೇಯಲು ಹೋದಾಗ ಅದರ ಬಾಲಕ್ಕೆ ಮಚ್ಚಿನಿಂದ ಹೊಡೆದಂತೆ ಗಾಯವಾಗಿತ್ತು. ಅದರ ಅರ್ಧ ಬಾಲ ಜೋತಾಡುತ್ತಿತ್ತು. ಶಸ್ತ್ರಚಿಕಿತ್ಸೆ ಬಳಿಕ ಆನೆ ಚೇತರಿಸಿಕೊಂಡಿತ್ತು.

ಈ ಕುರಿತಂತೆ ಅರಣ್ಯ ಇಲಾಖೆ ಆಂತರಿಕ ತನಿಖೆ ನಡೆಸಲು ಕ್ರಮಕೈಗೊಂಡಿತ್ತು. ಇದೀಗ ಘಟನೆ ನಡೆದು ಹಲವು ದಿನಗಳ ನಂತರ, ಸದರಿ ಆನೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದ ಇಬ್ಬರು ಕಾವಾಡಿಗಳನ್ನು ಅಮಾನತ್ತುಗೊಳಿಸಲಾಗಿದೆ.

ನಿಗೂಢ: ಮಚ್ಚಿನೇಟಿನಿಂದ ಆನೆ ಬಾಲಕ್ಕೆ ಗಾಯವಾಗಿದೆ ಎಂದು ಹೇಳಲಾಗಿತ್ತು. ಇದಕ್ಕೆ ಕಾರಣಕರ್ತರಾದವರು ಯಾರು? ಬಾಲ ತುಂಡರಿಸುವ ಪ್ರಯತ್ನ ಮಾಡಿದ್ದು ಏಕೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ನಿಖರ ಉತ್ತರ ಸಿಕ್ಕಿಲ್ಲ. ಇದು ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *