ಸಾರ್ವಜನಿಕರ ಗಮನ ಸೆಳೆಯುತ್ತಿರುವ ಶಿವಮೊಗ್ಗದ ಕಾಶೀಪುರ ಫ್ಲೈ ಓವರ್ ಫೋಟೋಗಳು..!

Railway flyovers and underpasses are needed in various parts of Shivamogga city: Will MPs pay attention? ಶಿವಮೊಗ್ಗ ನಗರದ ವಿವಿಧೆಡೆ ಅಗತ್ಯವಿದೆ ರೈಲ್ವೆ ಫ್ಲೈ ಓವರ್ – ಅಂಡರ್ ಪಾಸ್ : ಗಮನಹರಿಸುವರೆ ಸಂಸದರು?

ಶಿವಮೊಗ್ಗ, ನ. 15: ಶಿವಮೊಗ್ಗ ನಗರದ ಕಾಶೀಪುರ ರೈಲ್ವೆ ಗೇಟ್ ಬಳಿ ನಿರ್ಮಿಸಲಾಗುತ್ತಿದ್ದ ರೈಲ್ವೆ ಮೇಲ್ಸೇತುವೆ (ಫ್ಲೈ ಓವರ್) ಕಾಮಗಾರಿ ಪೂರ್ಣಗೊಂಡಿದೆ. ಈಗಾಗಲೇ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಈ ನಡುವೆ ಡ್ರೋಣ್ ಮೂಲಕ ತೆಗೆಯಲಾದ ಫ್ಲೈ ಓವರ್ ನ ಕೆಲ ಫೋಟೋಗಳು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸಾರ್ವಜನಿಕರ ಗಮನ ಸೆಳೆಯುತ್ತಿವೆ.

Kashipura flyover photos of Shimoga that are attracting public attention..!

ಶಿವಮೊಗ್ಗ ಅರಣ್ಯ ಇಲಾಖೆ ಕಾರ್ಯಾಚರಣೆ : ಲಕ್ಷಾಂತರ ರೂ. ಮೌಲ್ಯದ ನಾಟಾ ವಶ : ಓರ್ವನ ಬಂಧನ!

ಸರಿಸುಮಾರು ಕಳೆದ ಎರಡೂವರೆ ವರ್ಷಗಳ ಹಿಂದೆ, ಕಾಶೀಪುರ ರೈಲ್ವೆ ಗೇಟ್ ಬಳಿ ಫ್ಲೈ ಓವರ್ ನಿರ್ಮಾಣ ಕಾರ್ಯ ಆರಂಭಿಸಲಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ,  ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲಾಗಿದೆ.

ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಾಗಿತ್ತು. ಆದರೆ ಕೊರೊನಾ, ಲಾಕ್ ಡೌನ್, ನಿರ್ಮಾಣ ಸಂಸ್ಥೆಯ ವಿಳಂಬಗತಿಯ ಕಾಮಗಾರಿ ಮತ್ತೀತರ ಕಾರಣಗಳಿಂದ ನಿರ್ಮಾಣ ಕಾರ್ಯ ವಿಳಂಬವಾಗಿತ್ತು.

Kashipura flyover photos of Shimoga that are attracting public attention..!

ಶಿವಮೊಗ್ಗ ಅರಣ್ಯ ಇಲಾಖೆ ಕಾರ್ಯಾಚರಣೆ : ಲಕ್ಷಾಂತರ ರೂ. ಮೌಲ್ಯದ ನಾಟಾ ವಶ : ಓರ್ವನ ಬಂಧನ!

ದಟ್ಟಣೆ: ಗೆಜ್ಜೇನಹಳ್ಳಿ ರೈಲ್ವೆ ಸ್ಟೇಷನ್ ಬಳಿ ಕೋಚಿಂಗ್ ಡಿಪೋ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಈ ಮಾರ್ಗದಲ್ಲಿ ರೈಲುಗಳ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಈ ಕಾರಣದಿಂದ ಕಾಶೀಪುರ ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ನಿರ್ಮಾಣ ಮಾಡಲಾಗಿದೆ.

ಫ್ಲೈ ಓವರ್ ನಿರ್ಮಾಣಕ್ಕೂ ಮುನ್ನ ಸದರಿ ರೈಲ್ವೆ ಗೇಟ್ ಬಳಿ ವಾಹನ ಸಂಚಾರ ದುಸ್ತರವಾಗಿ ಪರಿಣಮಿಸಿತ್ತು. ಫ್ಲೈ ಓವರ್ ನಿರ್ಮಾಣ ನಂತರ, ಸದರಿ ಸ್ಥಳದಲ್ಲಿ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *