ಲೋಕಸಭೆ ಸಾರ್ವತ್ರಿಕ ಚುನಾವಣೆ – 2024: ಶಿವಮೊಗ್ಗದಲ್ಲಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

Lok Sabha General Election – 2024: Training Workshop for Officers at Shimoga

ಶಿವಮೊಗ್ಗ, ಡಿ. 4: ಭಯಮುಕ್ತ ಚುನಾವಣೆ ನಡೆಸುವಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಅತಿ ಮುಖ್ಯವಾಗಿದ್ದು, ಯಾವುದೇ ಲೋಪದೋಷವಿಲ್ಲದಂತೆ ಕಾರ್ಯ ನಿರ್ವಹಿಸಲು ಸನ್ನದ್ದರಾಗಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿಗಳು ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣಾ ವೇಳೆ ಸೆಕ್ಟರ್ ಅಧಿಕಾರಿಗಳ/ಸೆಕ್ಟರ್ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಗಳು, ಕರ್ತವ್ಯಗಳು ಹಾಗೂ ಒಟ್ಟಾರೆ ಕಾರ್ಯವಿಧಾನದ ಕುರಿತು ಇಂದಿನ ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ತರಬೇತುದಾರರು ತರಬೇತಿಯನ್ನು ನೀಡುವರು. ತರಬೇತಿ ಪಡೆದ ಸೆಕ್ಟರ್ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ತಿಳಿಸಿದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸೆಕ್ಟರ್ ಅಧಿಕಾರಿ/ಪೊಲೀಸ್ ಸೆಕ್ಟರ್ ಅಧಿಕಾರಿಗಳ ಕಾರ್ಯ ವಿಧಾನದ ಕುರಿತು ವಿವರಣೆ ನೀಡಿದರು.

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರನಾಯ್ಕ್ ಪಿಪಿಟಿ ಮೂಲಕ ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿಗಳು, ಸ್ಥಾನಮಾನಗಳು, ಸಿದ್ದತೆಗಳು, ಕಾರ್ಯವಿಧಾನದ ಕುರಿತು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪೊಲೀಸ್, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *