‘ಅಲ್ಪಸಂಖ್ಯಾತರ ಓಲೈಕೆ ಸರಿಯಲ್ಲ’ : ಸಿದ್ದರಾಮಯ್ಯ ವಿರುದ್ದ ಯಡಿಯೂರಪ್ಪ ಆಕ್ರೋಶ

'Minority wooing is not right': Yeddyurappa's outrage against Siddaramaiah ‘ಅಲ್ಪಸಂಖ್ಯಾತರ ಓಲೈಕೆ ಸರಿಯಲ್ಲ’ : ಸಿದ್ದರಾಮಯ್ಯ ವಿರುದ್ದ ಯಡಿಯೂರಪ್ಪ ಆಕ್ರೋಶ

ಶಿವಮೊಗ್ಗ, ಡಿ. 6: ‘ಅಲ್ಪಸಂಖ್ಯಾತರಿಗೆ ಹಣ ಕೊಡಲು ಅಭ್ಯಂತರವಿಲ್ಲ. ಆದರೆ ಅದನ್ನೇ ದೊಡ್ಡದನ್ನಾಗಿ ಮಾಡಿಕೊಂಡು 10 ಸಾವಿರ ಕೋಟಿ ರೂ. ಕೊಡುತ್ತಿದ್ದೆನೆ ಎಂದು ಹೇಳಿ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿರುವುದು ಶೋಭೆ ತರುವಂತದ್ದಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಿಎಂ ಅವರ ಈ ಕ್ರಮದಿಂದ ಹಿಂದೂಗಳ ಆಕ್ರೋಶಕ್ಕೂ ಅವಕಾಶವಾಗುತ್ತದೆ. ಮುಖ್ಯಮಂತ್ರಿಯವರಿಂದ ಈ ರೀತಿಯ ಮಾತುಗಳನ್ನ ತಾವು ನಿರೀಕ್ಷೆ ಮಾಡಿದ್ದೆ ಎಂದರು.

ಸಿಎಂ ಅವರ ಈ ಮಾತುಗಳನ್ನು ಈಗಾಗಲೇ ಕೆಲ ಮಠಾಧಿಪತಿಗಳು ಖಂಡಿಸಿದ್ದಾರೆ. ಇನ್ನಾದರೂ ಮಾತನಾಡುವ ವೇಳೆ ಎಚ್ಚರಿಕೆಯಿಂದ ಮಾತನಾಡಬೇಕೆಂಬ ಸಲಹೆಯನ್ನು ಸಿಎಂಗೆ ನೀಡುತ್ತೆನೆ ಎಂದು ಹೇಳಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಚುನಾವಣೆ ನಡೆಸುತ್ತೆವೆ. ಬಿಜೆಪಿ ಪರವಾದ ವಾತಾವರಣವಿದೆ. ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಜಯ ಸಾಧಿಸುತ್ತೆವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.  

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *