ಮಲ್ಲಾಪುರದಲ್ಲಿ ಚಿರತೆಗಳು : ಒಂದು ಬೋನಿಗೆ, ಮತ್ತೊಂದು ನಾಪತ್ತೆ!

ಶಿವಮೊಗ್ಗ, ಫೆ. 13: ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ.
ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ ಬಿದ್ದ ಚಿರತೆಯನ್ನು ತ್ಯಾವರೆಕೊಪ್ಪ ಹುಲಿ-ಸಿಂಹಾಧಾಮಕ್ಕೆ ಕೊಂಡೊಯ್ದಿದ್ದಾರೆ.
ಮತ್ತೊಂದು ಚಿರತೆ ಗ್ರಾಮದ ಸುತ್ತಮುತ್ತ ಸಂಚರಿಸುತ್ತಿದ್ದು, ಆ ಚಿರತೆಯ ಸೆರೆಗೂ ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು. ಈ ಮೂಲಕ ಗ್ರಾಮಸ್ಥರಲ್ಲಿರುವ ಆತಂಕ ಹೋಗಲಾಡಿಸಬೇಕು ಎಂದು ಮುಖಂಡ ಬೋಜ್ಯಾನಾಯ್ಕ್ ಅವರು ಆಗ್ರಹಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →