ಪರಿಸರ ಪ್ರೇಮಿ ಮನೆ ಮುಂಭಾಗವಿದ್ದ ಶ್ರೀಗಂಧದ ಮರಗಳನ್ನೇ ಕಳವು ಮಾಡಿದ ಕಳ್ಳರು!

Thieves stole the sandalwood trees in front of the house of an environmental lover! ಪರಿಸರ ಪ್ರೇಮಿ ಮನೆ ಮುಂಭಾಗವಿದ್ದ ಶ್ರೀಗಂಧದ ಮರಗಳನ್ನೇ ಕಳವು ಮಾಡಿದ ಕಳ್ಳರು!

ಸಾಗರ, ಡಿ. 10: ಮನೆಯೊಂದರ ಮುಂಭಾಗವಿದ್ದ ಎರಡು ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕೊಂಡೊಯ್ದಿರುವ ಘಟನೆ ಸಾಗರ ನಗರದ ರಾಂಪುರ ಬಡಾವಣೆಯ ಸುವಿಧಾ ಸೂಪರ್ ಮಾರ್ಕೆಟ್ ಸಮೀಪ ನಡೆದಿದೆ.

ಪರಿಸರ ಪ್ರೇಮಿ ಗೌತಮ್ ಪೈ ಎಂಬುವರ ಮನೆಯ ಬಳಿ ಈ ಘಟನೆ ನಡೆದಿದೆ. ‘ಡಿ. 6 ರ ಮುಂಜಾನೆ ಸರಿಸುಮಾರು 2.30 ರ ನಂತರ ಈ ಕೃತ್ಯ ನಡೆಸಲಾಗಿದೆ. ಒಂದು ಮರ 22 ವರ್ಷ ಹಾಗೂ ಮತ್ತೊಂದು ಮರ 18 ವರ್ಷ ಹಳೇಯದ್ದಾಗಿದೆ.

ಅತ್ಯಂತ ವ್ಯವಸ್ಥಿತವಾಗಿ ಶ್ರೀಗಂಧದ ಮರಗಳನ್ನು ಕಳವು ಮಾಡಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ’ ಎಂದು ಗೌತಮ್ ಪೈ ಅವರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಆರ್.ಎಫ್.ಓ ಅರವಿಂದ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *