ಎಸ್ಪಿ ವಾರ್ನಿಂಗ್ : ಎಚ್ಚೆತ್ತ ಶಿವಮೊಗ್ಗ ಪೊಲೀಸರು..!

SP Warning: Shimoga police on alert – attack on ganja stalls! ಎಸ್ಪಿ ವಾರ್ನಿಂಗ್ : ಎಚ್ಚೆತ್ತ ಶಿವಮೊಗ್ಗ ಪೊಲೀಸರು – ಗಾಂಜಾ ಅಡ್ಡೆಗಳ ಮೇಲೆ ದಾಳಿ!

ಶಿವಮೊಗ್ಗ, ಡಿ. 28: ಶಿವಮೊಗ್ಗ ನಗರದಲ್ಲಿ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳದಿದ್ದರೆ, ಪೊಲೀಸ್ ಅಧಿಕಾರಿ-ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದ ಬೆನ್ನಲ್ಲೇ, ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಕ್ರೈಂ ಚಟುವಟಿಕೆಗಳಿಗೆ ಮಟ್ಟ ಹಾಕುವ ಕಾರ್ಯ ಬಿರುಸುಗೊಂಡಿದೆ!

ಎಸ್ಪಿ ಎಚ್ಚರಿಕೆ ನಂತರ ಕೆಲ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಮೈಚಳಿ ಬಿಟ್ಟವರ ರೀತಿಯಲ್ಲಿ ಕಾರ್ಯನಿರ್ವಹಿಸಲಾರಂಭಿಸಿದ್ಧಾರೆ. ಇಷ್ಟು ದಿನ ರಾಜಾರೋಷವಾಗಿ ನಾನಾ ದಂಧೆ ನಡೆಸುತ್ತಿದ್ದವರು, ತಮ್ಮ ವ್ಯವಹಾರಗಳನ್ನು ದಿಢೀರ್ ಆಗಿ ಬಂದ್ ಮಾಡಲಾರಂಭಿಸಿದ್ದಾರೆ. ಕ್ರಿಮಿನಲ್ಸ್ ಗಳಿಗೆ ತಕ್ಕ ಶಾಸ್ತಿಯಾಗಲಾರಂಭಿಸಿದೆ.

ಗಾಂಜಾ ರೈಡ್ : ಇತ್ತೀಚೆಗೆ ಎಸ್ಪಿ ನಡೆಸಿದ ಸಭೆಯ ವೇಳೆ, ಗಾಂಜಾ ದಂಧೆಗೆ ಕಡಿವಾಣ ಹಾಕಲು 10 ದಿನಗಳ ಡೆಡ್’ಲೈನ್ ನೀಡಿದ್ದರು. ಇದೀಗ ಗಾಂಜಾ ರೈಡ್ ಗಳು ಹೆಚ್ಚಾಗಲಾರಂಭಿಸಿದೆ. ಮಾರಾಟಗಾರರು, ಸೇವನೆ ಮಾಡುವವರ ಪತ್ತೆ ಕಾರ್ಯ ಚುರುಕುಗೊಂಡಿದೆ.

ಗುರುವಾರ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಕ್ತಿಧಾಮ ಲೇಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕು ಚೋರಡಿಯ ಮರಾಠಿ ಕ್ಯಾಂಪ್ ನಿವಾಸಿ ನಾಗರಾಜ್ (38) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. 28 ಸಾವಿರ ರೂ. ಮೌಲ್ಯದ 680 ಗ್ರಾಂ ತೂಕದ ಒಣ ಗಾಂಜಾ, 1050 ರೂಪಾಯಿ ವಶಕ್ಕೆ ಪಡೆಯಲಾಗಿದೆ. ಆರೋಪಿ ವಿರುದ್ದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *