ಶಿವಮೊಗ್ಗ : ಸಮಯ ಪ್ರಜ್ಞೆ ಮೆರೆದ ASI ಶ್ರೀಹರ್ಷಗೆ ಸನ್ಮಾನಿಸಿದ SP 

Shimoga: SP honored ASI Sriharsha who was conscious of time ಶಿವಮೊಗ್ಗ : ಸಮಯ ಪ್ರಜ್ಞೆ ಮೆರೆದ ASI ಶ್ರೀಹರ್ಷಗೆ ಸನ್ಮಾನಿಸಿದ SP

ಶಿವಮೊಗ್ಗ, ಜ. 24: ಸಮಯ ಪ್ರಜ್ಞೆ ಹಾಗೂ ಸಂಯಮದ ಕಾರ್ಯನಿರ್ವಹಣೆ ಮೂಲಕ, ಸಾರ್ವಜನಿಕ ಸಮಾರಂಭ ಸ್ಥಳದಲ್ಲಿ ದಿಢೀರ್ ಏರ್ಪಟ್ಟ ಗೊಂದಲದ ವಾತಾವರಣ ನಿಯಂತ್ರಿಸುವಲ್ಲಿ ಸಫಲರಾದ, ಕೋಟೆ ಪೊಲೀಸ್ ಠಾಣೆ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ASI) ಶ್ರೀಹರ್ಷ ಅವರಿಗೆ ಎಸ್ಪಿ (SP) ಜಿ.ಕೆ.ಮಿಥುನ್ ಕುಮಾರ್ ಸನ್ಮಾನಿಸಿ ಅಭಿನಂದಿಸಿದ್ದಾರೆ.

22-01-2024 ರಂದು ಮಧ್ಯಾಹ್ನ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದ ಬಳಿ, ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಬಿಜೆಪಿ ಆಯೋಜಿಸಿದ್ದ ಸಿಹಿ ವಿತರಣೆ ಕಾರ್ಯಕ್ರಮದ ವೇಳೆ ದಿಢೀರ್ ಗೊಂದಲ ಸೃಷ್ಟಿಯಾಗಿತ್ತು. 

ಸ್ಥಳದಲ್ಲಿ ಕರ್ತವ್ಯನಿರತರಾಗಿದ್ದ ಶ್ರೀಹರ್ಷ ಅವರು ಸಮಯ ಪ್ರಜ್ಞೆ ತೋರಿ ಅತ್ಯಂತ ಸಂಯಮದಿಂದ ಪರಿಸ್ಥಿತಿ ನಿಭಾಯಿಸಿದ್ದರು. ಘಟನೆ ದೊಡ್ಡದಾಗದಂತೆ ಪರಿಸ್ಥಿತಿ ತಿಳಿಗೊಳಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದರು.

ಉತ್ತಮ ಕಾರ್ಯನಿರ್ವಹಣೆ ಮೆಚ್ಚಿ ಜ.24 ರಂದು ಸಂಜೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶ್ರೀಹರ್ಷ ಅವರಿಗೆ ಎಸ್ಪಿ ಸನ್ಮಾನಿಸಿದರು. ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನ ನೀಡಿ ಅಭಿನಂದಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *