11 ತಿಂಗಳ ಮಗುವಿನ ಗಂಟಲಲ್ಲಿದ್ದ ಮೀನು ತೆಗೆದು ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

Doctors at Surgi Hospital saved the life of an 11-month-old child by removing a fish from his throat 11 ತಿಂಗಳ ಮಗುವಿನ ಗಂಟಲಲ್ಲಿದ್ದ ಮೀನು ತೆಗೆದು ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

ಶಿವಮೊಗ್ಗ, ಫೆ. 6: ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ  ಪಾರು ಮಾಡಿದ್ದಾರೆ. 

ಹೊನ್ನಾಳಿ ತಾಲ್ಲೂಕು ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್‌ ಮತ್ತು ರೋಜಾ ದಂಪತಿಯ  11 ತಿಂಗಳ ಮಗು ಪ್ರತೀಕ್‌ ಮನೆಯೊಳಗೆ ಆಟವಾಡುತ್ತಿದ್ದಾಗ ಮೀನನ್ನು ನುಂಗಿ ಬಿಟ್ಟಿದೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಮೀನನ್ನು ಹೊರ ತೆಗೆಯಲು ಪ್ರಯತ್ನ ನಡೆಸಿದ್ದರಾದರೂ ಯಶಸ್ವಿ ಆಗಿರಲಿಲ್ಲ.

ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿಯು ಗಂಭೀರವಾಗಿತ್ತು. ಬಳಿಕ ಪೋಷಕರು ಮಗುವನ್ನು ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದರು. ಕೂಡಲೇ ತಪಾಸಣೆ ನಡೆಸಿದ ತಜ್ಞ ವೈದ್ಯರು ತೀವ್ರ ನಿಗಾಘಟಕದಲ್ಲಿರಿಸಿ, ಗಂಟಲಲ್ಲಿ ಸಿಕ್ಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನ್ನು ಹೊರ ತೆಗೆದು ಮಗುವಿನ ಜೀವವನ್ನು ಉಳಿಸಿದ್ದಾರೆ. ಇದೊಂದು ಅಪರೂಪದ ಪ್ರಕರಣವಾಗಿದೆ. ಈ ಪ್ರಕರಣದಲ್ಲಿ ಮಗುವಿಗೆ ಮಕ್ಕಳ ತಜ್ಞ ವೈದ್ಯ ಡಾ.ಪ್ರದೀಪ್‌ ಚಿಕಿತ್ಸೆ ಅವರು ನೀಡಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ. 

ಚಿಕ್ಕಮಕ್ಕಳು ಈ ರೀತಿ ಆಹಾರ ಪದಾರ್ಥ, ಇಲ್ಲವೇ ಚಾಕೋಲೇಟ್‌, ಕಾಡಿಗೆ ಡಬ್ಬಿ, ಅಡಕೆ, ಗೋಲಿ, ಗಜಗ, ಶೇಂಗಾ ಬೀಜದಂತಹ ವಸ್ತುಗಳನ್ನು ಗಂಟಲಲ್ಲಿ ಸಿಕ್ಕಿಸಿಕೊಂಡು ಪ್ರಾಣಕ್ಕೆ ಎರವಾದಂತಹ ಘಟನೆಗಳು ಈ ಹಿಂದೆ ನಡೆದಿದ್ದವು.  ಪೋಷಕರು ಚಿಕ್ಕಮಕ್ಕಳ ಕೈಗೆ ಯಾವುದೇ ಘನ ವಸ್ತುಗಳನ್ನು ಸಿಗದಂತೆ ಇಡಬೇಕು ಎಂದು  ತೀವ್ರ ನಿಗಾ ಘಟಕ ಹಾಗೂ ಶಸ್ತ್ರ ಚಿಕಿತ್ಸಾ ಘಟಕದ ತಜ್ಞ ವೈದ್ಯರಾದ ಡಾ.ವಿನೋದ್‌ ಸಲಹೆ ನೀಡಿದ್ದಾರೆ. ವೈದ್ಯರ ಸೇವೆಯನ್ನು ಸರ್ಜಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಂಜಯ ಸರ್ಜಿ ಹಾಗೂ  ಮೆಡಿಕಲ್‌ ಸೂಪರಿಂಟೆಂಡೆಂಟ್‌ ಡಾ.ಪ್ರಶಾಂತ್‌ ಅವರು ಶ್ಲಾಘಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *