40 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸೊರಬ ಪುರಸಭೆ ಕಂದಾಯ ನಿರೀಕ್ಷಕ!

Soraba municipality revenue inspector who fell into Lokayukta's trap while taking bribe! 40 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸೊರಬ ಪುರಸಭೆ ಕಂದಾಯ ನಿರೀಕ್ಷಕ!

ಸೊರಬ, ಮಾ. 6: ಮಹಿಳೆಯೋರ್ವರಿಂದ 40 ಸಾವಿರ ರೂ. ಲಂಚ ಪಡೆಯುವ ವೇಳೆಯೇ ಸೊರಬ ಪುರಸಭೆ ಕಂದಾಯ ನಿರೀಕ್ಷಕರೋರ್ವರು, ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬುಧವಾರ ನಡೆದಿದೆ.

ವಿನಾಯಕ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಕಂದಾಯ ನಿರೀಕ್ಷಕರೆಂದು ಗುರುತಿಸಲಾಗಿದೆ. ಇವರ ವಿರುದ್ದ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಂಚಕ್ಕೆ ಡಿಮ್ಯಾಂಡ್ : ದೂರುದಾರರಾದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಪ್ರತಿಭಾ ಎಂ ನಾಯ್ಕ್ ಎಂಬುವರಿಗೆ ಸೊರಬ ತಾಲೂಕು ಕಸಬಾ ಹೋಬಳಿ ಹಳೇ ಸೊರಬ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಜಾಗವಿತ್ತು.

ಸದರಿ ಪ್ರದೇಶವು ಪುರಸಭೆಗೆ ಸೇರ್ಪಡೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪುರಸಭೆ ಖಾತೆ, ಇ-ಸ್ವತ್ತು ಮಾಡಿಸಿಕೊಂಡಿದ್ದರು. ಆದರೆ ಇ-ಸ್ವತ್ತಿನಲ್ಲಿ ಜಾಗದ ವಿಸ್ತೀರ್ಣದ ವಿವರ ಕಡಿಮೆ ನಮೂದಾಗಿತ್ತು. ಮೂಲ ವಿಸ್ತೀರ್ಣಕ್ಕೆ ಅನುಗುಣವಾಗಿ ಇ-ಸ್ವತ್ತು ಮಾಡಿಕೊಡುವಂತೆ ಕೋರಿ ಪುರಸಭೆಗೆ ಮತ್ತೆ ಅರ್ಜಿ ಸಲ್ಲಿಸಿದ್ದರು.

14-2-2024 ರಂದು ದೂರುದಾರರು ತಮ್ಮ ತಂದೆಯ ಜೊತೆ ಪುರಸಭೆಗೆ ತೆರಳಿ, ಕಂದಾಯ ನಿರೀಕ್ಷಕ ವಿನಾಯಕರನ್ನು ಭೇಟಿಯಾಗಿ ಅರ್ಜಿ ಕುರಿತಂತೆ ವಿಚಾರಿಸಿದ್ದರು. ಈ ವೇಳೆ ವಿನಾಯಕ ಅವರು 50 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು. ಅಂತಿಮವಾಗಿ 40 ಸಾವಿರ ರೂ. ನೀಡಿದರೆ ಕೆಲಸ ಮಾಡಿಕೊಡುವುದಾಗಿ ಹೇಳಿದ್ದರು.

ಆದರೆ ಲಂಚ ಕೊಡಲು ಇಷ್ಟವಿರದ ದೂರುದಾರರು, ಶಿವಮೊಗ್ಗ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಮಾ. 6 ರಂದು ದೂರುದಾರರು 40 ಸಾವಿರ ರೂ.ಗಳನ್ನು ವಿನಾಯಕಗೆ ನೀಡುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚದ ಹಣದ ಸಮೇತ ಅಧಿಕಾರಿಯನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ವಾಸುದೇವರಾಮ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *