ಶಿವಮೊಗ್ಗದ ಕೆ.ಎಸ್.ಈಶ್ವರಪ್ಪ ನಿವಾಸದ ಬಳಿಯೇ ಮಹಿಳೆಯರಿಬ್ಬರ ಸರಗಳ್ಳತನ – ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದುಷ್ಕರ್ಮಿಗಳ ಕೃತ್ಯ!

The robbery of two women near the residence of KS Eshwarappa in Shimoga - the act of criminals caught on CC camera! ಶಿವಮೊಗ್ಗದಲ್ಲಿ ಮಹಿಳೆಯರಿಬ್ಬರ ಸರಗಳ್ಳತನ – ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದುಷ್ಕರ್ಮಿಗಳ ಕೃತ್ಯ!

ಶಿವಮೊಗ್ಗ (shivamogga), ಏ. 4: ಬೈಕ್ ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು, ವಾಕಿಂಗ್’ಗೆ ತೆರಳುತ್ತಿದ್ದ ಮಹಿಳೆಯರಿಬ್ಬರ ಬಂಗಾರದ ಸರ (gold chain) ಕಳವು ಮಾಡಿ ಪರಾರಿಯಾದ ಘಟನೆ, ಗುರುವಾರ ಮುಂಜಾನೆ ಶಿವಮೊಗ್ಗ (shivamogga) ನಗರದಲ್ಲಿ ನಡೆದಿದೆ. ( www. udayasaakshi.com )

ಮಲ್ಲೇಶ್ವರ ನಗರದಲ್ಲಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪರ ನಿವಾಸದ ಬಳಿ ಬೆಳಿಗ್ಗೆ ಸರಿಸುಮಾರು 5 ಗಂಟೆ ವೇಳೆಗೆ ಕೃತ್ಯ ನಡೆದಿದೆ. ಸ್ಥಳೀಯ ನಿವಾಸಿಗಳಾದ ನಾಗರತ್ನ (66) ಹಾಗೂ ಸುಲೋಚನಾ (63) ಸರ ಕಳೆದುಕೊಂಡ ಮಹಿಳೆಯರೆಂದು ಗುರುತಿಸಲಾಗಿದೆ.

ನಾಗರತ್ನರಿಗೆ ಸೇರಿದ 30 ಗ್ರಾಂ ಹಾಗೂ ಸುಲೋಚನಾ ಅವರಿಗೆ ಸೇರಿದ 31 ಗ್ರಾಂ ತೂಕದ ಸರಗಳನ್ನು ಕಳವು ಮಾಡಲಾಗಿದೆ. ಇವುಗಳ ಮೌಲ್ಯ ಸರಿಸುಮಾರು 2.50 ಲಕ್ಷ ರೂ.ಗಳಿಗೂ ಅಧಿಕವೆಂದು ಅಂದಾಜಿಸಲಾಗಿದೆ. ( www. udayasaakshi.com )

ವಿಳಾಸದ ನೆಪ : ಬೈಕ್ ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು, ವಿಳಾಸ ಕೇಳುವ ನೆಪದಲ್ಲಿ ವಾಕಿಂಗ್ ತೆರಳುತ್ತಿದ್ದ ಇಬ್ಬರು ಮಹಿಳೆಯರನ್ನು ನಿಲ್ಲಿಸಿದ್ದಾರೆ. ವಿಳಾಸ ಕೇಳಿದ ನಂತರ ಓರ್ವ ಬೈಕ್ ನಿಂದ ಕೆಳಕ್ಕಿಳಿದು ಹಿಂಬದಿಯಿಂದ ಇಬ್ಬರು ಮಹಿಳೆಯರ ಸರಗಳನ್ನು (chain snatching) ಕಿತ್ತುಕೊಂಡಿದ್ದಾನೆ. ನಂತರ ಬೈಕ್ ನಲ್ಲಿ ಪರಾರಿಯಾಗಿದ್ದಾರೆ.

ಸದರಿ ಘಟನೆಯ ದೃಶ್ಯ  ಕೆ.ಎಸ್.ಈಶ್ವರಪ್ಪ (k s eshwarappa) ನಿವಾಸದ ಮುಂಭಾಗ ಅಳವಡಿಸಿರುವ ಸಿ ಸಿ ಕ್ಯಾಮರಾದಲ್ಲಿ (cc camera) ಸೆರೆಯಾಗಿದೆ. ಸದರಿ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ (social media) ವೈರಲ್ (viral) ಆಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆ (kote police station) ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ಕ್ರಮಕೈಗೊಂಡಿದ್ದಾರೆ. ( www. udayasaakshi.com )

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *