ಬೆಳ್ಳಂಬೆಳಿಗ್ಗೆ ಶಿವಮೊಗ್ಗದಲ್ಲಿ ಗುಡುಗು ಸಹಿತ ಭರ್ಜರಿ ಮಳೆ!

Heavy rain with thunder in Shimoga in the morning! A young farmer was killed by lightning! ಬೆಳ್ಳಂಬೆಳಿಗ್ಗೆ ಶಿವಮೊಗ್ಗದಲ್ಲಿ ಗುಡುಗು ಸಹಿತ ಭರ್ಜರಿ ಮಳೆ! ಸಿಡಿಲು ಬಡಿದು ಯುವ ರೈತ ಸಾವು! ವರದಿ : ಬಿ.ರೇಣುಕೇಶ್ b.renukesha

ಶಿವಮೊಗ್ಗ, (shivamogga), ಏ. 20: ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ವಿವಿಧೆಡೆ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದೆ. ಶುಕ್ರವಾರ ಸಂಜೆ ಧಾರಾಕಾರ ವರ್ಷಧಾರೆಗೆ (heavy rainfall) ಸಾಕ್ಷಿಯಾಗಿದ್ದ ಶಿವಮೊಗ್ಗ ನಗರ (shimoga city) ಹಾಗೂ ತಾಲೂಕಿನ ಹಲವೆಡೆ, ಶನಿವಾರ ಮುಂಜಾನೆಯೇ ಗುಡುಗು – ಸಿಡಿಲು (thunder) ಸಹಿತ ಮಳೆಯಾಯಿತು. ಇದು ನಗರವನ್ನು ಮತ್ತಷ್ಟು ಕೂಲ್ ಆಗುವಂತೆ ಮಾಡಿತ್ತು.

ಕಳೆದ ಹಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕಣ್ಮರೆಯಾಗಿತ್ತು. ಬಿಸಿಲ ತಾಪ (temperature) ಹೆಚ್ಚಾಗಿತ್ತು. ಇದು ನಾಗರೀಕರನ್ನು ಹೈರಾಣಾಗುವಂತೆ ಮಾಡಿತ್ತು.

ಮತ್ತೊಂದೆಡೆ, ತಾಪಮಾನ ಹೆಚ್ಚಳದಿಂದ ಕೆರೆಕಟ್ಟೆಗಳಲ್ಲಿ ನೀರು ಬರಿದಾಗಲಾರಂಭಿಸಿತ್ತು. ಅಂತರ್ಜಲ (ground water) ಕುಸಿತದಿಂದ ಬೋರ್’ವೆಲ್ ಗಳಲ್ಲಿ ನೀರಿನ ಸಂಗ್ರಹ ಕುಸಿಯಲಾರಂಭಿಸಿತ್ತು. ಇದರಿಂದ ಕುಡಿಯುವ ನೀರಿಗೆ ಹಾಹಾಕಾರ ಕಂಡುಬರಲಾರಂಭಿಸಿತ್ತು. ಈ ನಡುವೆ ಬೀಳುತ್ತಿರುವ ಬೇಸಿಗೆ ಮಳೆಯು ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಇನ್ನಷ್ಟು ದಿನಗಳ ಕಾಲ ಮಳೆ ಮುಂದುವರಿದರೆ ಸಾಕಷ್ಟು ಅನುಕೂಲವಾಗಲಿದೆ ಎಂಬುವುದು ನಾಗರೀಕರ ಅಭಿಪ್ರಾಯವಾಗಿದೆ.

ಶಿವಮೊಗ್ಗ, ಏ. 20: ಸಿಡಿಲು ಬಡಿತದಿಂದ ಯುವಕನೋರ್ವ ಮೃತಪಟ್ಟು, ಮತ್ತೋರ್ವರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಹರಮಘಟ್ಟ ಗ್ರಾಮದ ನಿವಾಸಿ ರಾಕೇಶ್ (30) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ರುದ್ರೇಶ್ ಎಂಬುವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತಂತೆ ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (shimoga rural polic station) ಪ್ರಕರಣ ದಾಖಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *