ಹಾಸನ ಪ್ರಕರಣ : ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಲಿ – ಹೆಚ್.ಡಿ.ಕುಮಾರಸ್ವಾಮಿ

Hassan's pen drive case: Let the culprits be punished - HD Kumaraswamy ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ : ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಲಿ – ಹೆಚ್.ಡಿ.ಕುಮಾರಸ್ವಾಮಿ

ಶಿವಮೊಗ್ಗ (shivamogga), ಏ. 29: ಹಾಸನದ (hassan) ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ (prajwal revanna sex scandal) ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (h d kumaraswamy) ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿ, ‘ಸಮಾಜದಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು. ನಿಷ್ಪಕ್ಷಪಾತ ತನಿಖೆಯಾಗಲಿ. ತಮ್ಮ ಕುಟುಂಬ ಮಹಿಳೆಯರ ಬಗ್ಗೆ ಮೊದಲಿನಿಂದಲೂ ಗೌರವಯುತವಾಗಿ ನಡೆದುಕೊಂಡು ಬಂದಿದೆ’ ಎಂದು ತಿಳಿಸಿದ್ದಾರೆ. ( www.udayasaakshi.com )

ಸುದ್ದಿಗೋಷ್ಠಿಯಲ್ಲಿ (pressmeet) ಸೋಮವಾರ ಅವರು ಮಾತನಾಡಿದರು. ಯಾರೇ ತಪ್ಪು ಮಾಡಿದ್ದರೂ ಅದು ತಪ್ಪೇ. ಈ ನಾಡಿನ ಕಾನೂನಿಗೆ ಪ್ರತಿಯೋರ್ವರು ತಲೆಬಾಗಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಸರ್ಕಾರ ಎಸ್ಐಟಿ (SIT) ರಚಿಸಿದೆ. ಎಫ್ಐಆರ್ (FIR) ಕೂಡ ಆಗಿದೆ. ತನಿಖೆಯಿಂದ ಸತ್ಯಾಂಶ ಹೊರಬರಲಿ. ಈ ವಿಷಯದಲ್ಲಿ ತಾವು ಯಾರ ಮೇಲೂ ಪ್ರಭಾವ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಸದರಿ ವಿಷಯ ತಮಗೆ ಗೊತ್ತಿರಲಿಲ್ಲ. ಮೊದಲೇ ಗಮನಕ್ಕೆ ಬಂದಿದ್ದರೆ ಮುಜುಗರ ತಪ್ಪಿಸಬಹುದಾಗಿತ್ತು. ಪ್ರಜ್ವಲ್ ರೇವಣ್ಣ (prajwal revanna) ಎಲ್ಲಿ ಹೋಗುತ್ತಾರೆ ಎಂದು ಕಾದು ಕುಳಿತುಕೊಳ್ಳಲಾಗುತ್ತದೆಯೇ? ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ( www.udayasaakshi.com )

ಪಕ್ಷದಿಂದಲೂ (jds party) ಕ್ರಮಕೈಗೊಳ್ಳಲಾಗುವುದು. ಎಸ್ಐಟಿ ವರದಿ ಬರಲಿ. ಸತ್ಯಾಂಶ ಏನೆಂಬುವುದು ಗೊತ್ತಾಗುತ್ತದೆ. ಸದ್ಯ ಈ ಪ್ರಕರಣದ ಬಗ್ಗೆ ತಮ್ಮ ನಿಲುವು ಏನೆಂಬುವುದನ್ನು ಸ್ಪಷ್ಟಪಡಿಸಿದ್ದೆನೆ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಪೂರ್ವದಲ್ಲಿ ಪೆನ್ ಡ್ರೈವ್ (hassan pen drive case) ಪ್ರಕರಣ ಚರ್ಚೆಗೆ ಬಂದಿದ್ದೇಕೆ. ಈ ಪ್ರಕರಣ ಫಲಿತಾಂಶದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ (h d kumaraswamy) ತಿಳಿಸಿದ್ದಾರೆ. ( www.udayasaakshi.com )

*** ‘ವ್ಯಕ್ತಿ (ಪ್ರಜ್ವಲ್ ರೇವಣ್ಣ) ಬಗ್ಗೆ ಚರ್ಚೆ ಮಾಡಿಕೊಳ್ಳಿ. ಕುಟುಂಬದ ಪ್ರಶ್ನೆಯಲ್ಲ. ಕಾಂಗ್ರೆಸ್ ಮಹಾನ್ ನಾಯಕರ ಬಗ್ಗೆ ಎಲ್ಲ ಗೊತ್ತಿದೆ. ಹೆಚ್.ಡಿ.ದೇವೇಗೌಡ (h d devegowda), ಕುಮಾರಸ್ವಾಮಿಯವರ (h d kumaraswamy) ಹೆಸರು ಏಕೆ ತರುತ್ತಿರಿ? ಈ ವಿಷಯದಲ್ಲಿ ತಮ್ಮೊಬ್ಬರಿಗೆ ಅಲ್ಲ. ಇಡೀ ಸಮಾಜಕ್ಕೆ ಮುಜುಗರವಾಗುತ್ತದೆ. ಎಫ್ಐಆರ್ ಆಗಿದೆ. ತನಿಖಾ ವರದಿ (enquiry report) ಬರಲಿ’ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ( www.udayasaakshi.com )

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *