ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆ!

Heavy rain with thunder in Shimoga! ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆ!

ಶಿವಮೊಗ್ಗ (shivamogga), ಮೇ 19: ಮಲೆನಾಡಿನಲ್ಲಿ (malnad) ಕಳೆದ ಕೆಲ ದಿನಗಳಿಂದ ಚುರುಕುಗೊಂಡಿರುವ ಮುಂಗಾರು ಪೂರ್ವ ಮಳೆ (pre monsoon rain) ಮತ್ತಷ್ಟು ಬಿರುಸುಗೊಂಡಿದೆ. ಹಲವೆಡೆ ಮಳೆಯ ಅಬ್ಬರ ಜೋರಾಗಿದೆ.

ಈ ನಡುವೆ ಶಿವಮೊಗ್ಗ (shivamogga) ನಗರದಲ್ಲಿಯೂ ವರ್ಷಧಾರೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ ನಗರ ವ್ಯಾಪ್ತಿ ಸೇರಿದಂತೆ ಹೊರವಲಯದ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಸರಿಸುಮಾರು 1 ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಯಿತು (heavy rainfall). ( www.udayasaakshi.com )

@UdayaSaakshi

ಎಡೆಬಿಡದೆ ಸುರಿದ ಮಳೆಯಿಂದ ಹಲವೆಡೆ ರಸ್ತೆಗಳು ಕೆರೆಯಂತಾಗಿ ಪರಿವರ್ತಿತವಾಗಿದ್ದವು. ಹಲವೆಡೆ ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆಯ ಮೇಲೆಯೇ ಹರಿದು ಹೋಗುತ್ತಿದ್ದ ದೃಶ್ಯ ಕಂಡುಬಂದಿತು.

ಜೈಲ್ ರಸ್ತೆಯ ಮೇಲೆಯೇ ಭಾರೀ ಪ್ರಮಾಣದ ಮಳೆ ನೀರು ಹರಿಯಿತು. ಇದರಿಂದ ತಗ್ಗು ಪ್ರದೇಶಗಳಲ್ಲಿನ ಕಟ್ಟಡಗಳಿಗೆ ನೀರು ನುಗ್ಗಿದ ಮಾಹಿತಿಗಳು ಬಂದಿವೆ. ( www.udayasaakshi.com )

ಕೆರೆಗಳಿಗೆ ನೀರು : ತೀವ್ರ ಸ್ವರೂಪದ ಬಿಸಿಲು ಹಾಗೂ ಮುಂಗಾರು ಮಳೆ (monsoon) ಕೊರತೆಯಿಂದ ಜಿಲ್ಲೆಯ ಹಲವೆಡೆ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗಿದ್ದವು. ಆದರೆ ಪ್ರಸ್ತುತ ಬೀಳುತ್ತಿರುವ ಭಾರೀ ಮಳೆಯಿಂದ ಕೆರೆಕಟ್ಟೆಗಳಲ್ಲಿ ನೀರಿನ ಸಂಗ್ರಹ ಕಂಡುಬರಲಾರಂಭಿಸಿದೆ.

ಮುನ್ಸೂಚನೆ : ಮುಂದಿನ ಕೆಲ ದಿನಗಳವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. ( www.udayasaakshi.com )

ಒಟ್ಟಾರೆ ಶಿವಮೊಗ್ಗ ಜಿಲ್ಲೆಯಲ್ಲಿ (shimoga district) ಕಳೆದ ಹಲವು ತಿಂಗಳುಗಳಿಂದ ವರ್ಷಧಾರೆ ಕಣ್ಮರೆಯಾಗಿತ್ತು. ಆದರೆ ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಮುಂಗಾರು ಪೂರ್ವ ಮಳೆಯು ನಾಗರೀಕರಲ್ಲಿ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *