ಶಿವಮೊಗ್ಗದಲ್ಲಿ ಶಾಲಾ ವಾಹನಗಳ ತಪಾಸಣೆ : ಚಾಲಕರಿಗೆ ಟ್ರಾಫಿಕ್ ಪೊಲೀಸರ ಖಡಕ್ ವಾರ್ನಿಂಗ್!

Inspection of school vehicles in Shimoga: Traffic police warning drivers! ಶಿವಮೊಗ್ಗದಲ್ಲಿ ಶಾಲಾ ವಾಹನಗಳ ತಪಾಸಣೆ : ಚಾಲಕರಿಗೆ ಟ್ರಾಫಿಕ್ ಪೊಲೀಸರ ಖಡಕ್ ವಾರ್ನಿಂಗ್!

ಶಿವಮೊಗ್ಗ (shivamogga), ಜೂ. 18: ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ದಿಢೀರ್ ತಪಾಸಣೆ ನಡೆಸಿದ ಟ್ರಾಫಿಕ್ ಠಾಣೆ ಪೊಲೀಸರು (traffic police), ವಾಹನ ಚಾಲಕರಿಗೆ ಸಂಚಾರಿ ನಿಯಮಗಳ ಪಾಲನೆ ಕುರಿತಂತೆ ಸಲಹೆ – ಸೂಚನೆಗಳನ್ನು ನೀಡಿದ್ದಾರೆ.

ಟ್ರಾಫಿಕ್ ಇನ್ಸ್’ಪೆಕ್ಟರ್ ಲತಾ ಬಿ ಕೆ ಅವರ ನೇತೃತ್ವದಲ್ಲಿ ಶಾಲಾ ವಾಹನಗಳ (school vechiles) ತಪಾಸಣೆ ಕಾರ್ಯ ನಡೆಯಿತು. ಶಾಲಾ ಮಕ್ಕಳ ವಾಹನಗಳಲ್ಲಿ ಸುರಕ್ಷತಾ ನಿಯಮಗಳ (safety regulations) ಪಾಲನೆ ಮಾಡಲಾಗುತ್ತಿದೆಯೇ ಎಂಬುವುದರ ಪರಿಶೀಲನೆ ನಡೆಸಲಾಗಿದೆ.

ಈ ಕುರಿತಂತೆ ಪೊಲೀಸ್ ಇಲಾಖೆ (police dept) ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ‘ವಾಹನ ನೊಂದಣಿ ಪ್ರಮಾಣ ಪತ್ರ, ಎಮಿಷನ್ ಟೆಸ್ಟ್, ಇನ್ಸೂರೆನ್ಸ್ ಪತ್ರ, ಚಾಲನಾ ಪರವಾನಿಗೆ (driving license), ಬ್ಯಾಡ್ಜ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಸೇರಿದಂತೆ ಇತರೆ ವಿವರಗಳನ್ನು ಪರಿಶೀಲಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಇದೇ ವೇಳೆ ವಾಹನಗಳ ಚಾಲಕರುಗಳಿಗೆ ಸಂಚಾರಿ ನಿಯಮಗಳ (traffic rules) ಪಾಲನೆ ಕುರಿತಂತೆ ತಿಳಿವಳಿಕೆ ನೀಡಲಾಗಿದೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಬಾರದು. ಚಾಲನೆ ವೇಳೆ ಮೊಬೈಲ್ ಪೋನ್ (mobile phone) ಬಳಸದಂತೆ, ಮದ್ಯ ಸೇವಿಸಿ ವಾಹನ ಚಲಾಯಿಸದಂತೆ

ಹಾಗೂ ವಾಹನಗಳಲ್ಲಿ ಲಭ್ಯವಿರುವ ಆಸನಗಳಿಗಿಂತ ಹೆಚ್ಚಿನ ಮಕ್ಕಳನ್ನು ಕೂರಿಸಿಕೊಂಡು ಹೋಗಬಾರದು. ಮಕ್ಕಳ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಕೈಗೊಳ್ಳುವಂತೆ ಪೊಲೀಸರು (police) ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *