42 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ : 17 ಜನ ಪ್ರತಿಭಟನಾಕಾರರ ವಿರುದ್ದ ಎಫ್ಐಆರ್!

Protest entered the 42nd day: FIR against 17 protestors! 42 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ : 17 ಜನ ಪ್ರತಿಭಟನಾಕಾರರ ವಿರುದ್ದ ಎಫ್ಐಆರ್!

ಶಿವಮೊಗ್ಗ (shivamogga), ಜೂ. 23: ಶಿವಮೊಗ್ಗ ಜಿಲ್ಲೆ ಭದ್ರಾವತಿ (bhadravathi) ತಾಲೂಕಿನ ಚಂದನಕೆರೆ ಗ್ರಾಮದ ದಲಿತ ಸಮುದಾಯದವರು, ಎಂಪಿಎಂ ಕಾರ್ಖಾನೆ (mpm factory) ವಿರುದ್ದ ಚಂದನಕೆರೆ ಗ್ರಾಮದ (chandanakere village) ನೆಡುತೋಪಿನ ಆವರಣದಲ್ಲಿ ನಡೆಸುತ್ತಿರುವ ಪ್ರತಿಭಟನೆಯು ಜೂ. 23 ರ ಭಾನುವಾರಕ್ಕೆ 42 ನೇ ದಿನಕ್ಕೆ ಕಾಲಿರಿಸಿದೆ.

ಈ ನಡುವೆ ಪ್ರತಿಭಟನಾಕಾರರ ವಿರುದ್ದ ಎಂಪಿಎಂ ಅರಣ್ಯ ವಿಭಾಗ ಮರ ಕಡಿತಲೆ ಹಾಗೂ ಮರದ ಚಿಗುರು ಕಟಾವು ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು (police complaint) ನೀಡಿದೆ. ಇದರ ಆಧಾರದ ಮೇಲೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ (holehonnuru police station) 17 ಜನರ ವಿರುದ್ದ ಎಫ್.ಐ.ಆರ್ ದಾಖಲಾಗಿದೆ.

ಈ ಕುರಿತಂತೆ ಹೋರಾಟದ ನೇತೃತ್ವವಹಿಸಿರುವ ದಲಿತ ಸಂಘರ್ಷ ಸಮಿತಿ (dss ಅಂಬೇಡ್ಕರ್ ವಾದ) ಸಂಘಟನೆಯ ಸಂಚಾಲಕ ಟಿ.ಹೆಚ್.ಹಾಲೇಶಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಪ್ರತಿಭಟನೆ ಹತ್ತಿಕ್ಕುವ ಉದ್ದೇಶದಿಂದ ಸುಳ್ಳು ಆರೋಪ ಹೊರಿಸಿ ದೂರು ದಾಖಲಿಸಲಾಗಿದೆ. ಇವ್ಯಾವುದೆ ಬೆದರಿಕೆಗೆ ಮಣಿಯುವುದಿಲ್ಲ. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.

ಚಂದನಕೆರೆ ಗ್ರಾಮದ ಸರ್ವೇ ನಂಬರ್ 12 ರಲ್ಲಿರುವ ಗೋಮಾಳ ಜಾಗದಲ್ಲಿನ 21 ಎಕರೆ ಪ್ರದೇಶವನ್ನು 1961 ರಲ್ಲಿ 14 ಜನರಿಗೆ ಮಂಜೂರಾಗಿತ್ತು. ತದನಂತರ ಸುಮಾರು 40 ಜನರು ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದಾರೆ. ಸದರಿ ಸರ್ವೇ ನಂಬರ್ ನಲ್ಲಿಯೇ 1985 ರಲ್ಲಿ 140 ಎಕರೆ ಪ್ರದೇಶವನ್ನು ಎಂಪಿಎಂಗೆ ಲೀಸ್ ಕೊಡಲಾಗಿತ್ತು. ಸಾಗುವಳಿ ಚೀಟಿ ನೀಡುವ ಹಂತದಲ್ಲಿದೆ.  

ಆದರೆ ಎಂಪಿಎಂ ಆಡಳಿತವು ದಲಿತ ಸಮುದಾಯದವರಿಗೆ ಮಂಜೂರಾಗಿದ್ದ ಪ್ರದೇಶವನ್ನು ಅತಿಕ್ರಮಿಸಿ ನೆಡುತೋಪು ನಿರ್ಮಾಣಕ್ಕೆ ಮುಂದಾಗಿರುವುದು ಸರಿಯಲ್ಲ. ಇದರ ವಿರುದ್ದ ಸದರಿ ಸ್ಥಳದಲ್ಲಿಯೇ ಪ್ರತಿಭಟನೆ (protest) ನಡೆಸಲಾಗುತ್ತಿದೆ. ಆದರೆ ಜಿಲ್ಲಾಡಳಿತ ಪ್ರತಿಭಟನಾಕಾರರ ಅಹವಾಲು ಆಲಿಸುವ ಗೋಜಿಗೆ ಹೋಗಿಲ್ಲ. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಟಿ.ಹೆಚ್.ಹಾಲೇಶಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *